Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ
Latest News Politics

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

Sambrama Prabha NewsBy Sambrama Prabha NewsSeptember 9, 2026Updated:September 9, 2026No Comments2 Mins Read
Share WhatsApp Facebook Twitter Telegram
ಸತೀಶ್ ಜಾರಕಿಹೊಳಿ DK Shivakumar on ED Raid on Satish Jarkiholi
Share
WhatsApp Facebook Twitter Telegram

ಬೆಂಗಳೂರು (ಸಂಭ್ರಮಪ್ರಭ ನ್ಯೂಸ್): ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರು ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸಿರುವ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಸತೀಶ್ ಜಾರಕಿಹೊಳಿ ಅವರು ಕಾನೂನು ಚೌಕಟ್ಟಿನಲ್ಲಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದರಲ್ಲಿ ಮುಚ್ಚಿಡುವಂತಹದ್ದು ಯಾವುದೂ ಇಲ್ಲ. ಇ.ಡಿ ಅಧಿಕಾರಿಗಳು ಮಾಡುವ ತನಿಖೆಗೆ ಮತ್ತು ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಸತೀಶ್ ಅವರು ಖಂಡಿತ ಸೂಕ್ತ ಉತ್ತರ ನೀಡಲಿದ್ದಾರೆ. ಇದರಿಂದ ಯಾರು ಗಾಬರಿಯಾಗುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ದಲಿತ ನಾಯಕನ ಬೆಳವಣಿಗೆ ಸಹಿಸುತ್ತಿಲ್ಲ

 “ಸತೀಶ್ ಜಾರಕಿಹೊಳಿ ಒಬ್ಬ ದಲಿತ ನಾಯಕರಾಗಿ ಎತ್ತರಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಂದ (ಬಿಜೆಪಿ) ಆಗುತ್ತಿಲ್ಲ. ದಲಿತರನ್ನು ತುಳಿಯುವ ಉದ್ದೇಶದಿಂದಲೇ ಈ ರೀತಿ ಮಾಡಲಾಗುತ್ತಿದೆ. ಆದರೆ ಇದು ಅವರಿಗೇ ತಿರುಗೇಟು ನೀಡಲಿದೆ. ನಾಳೆ ನಮ್ಮ ಸರ್ಕಾರಕ್ಕೆ 100 ದಿನ ತುಂಬುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಸರ್ಕಾರದ ಸಾಧನೆಗಳನ್ನು ಮತ್ತು ಕೆಲವು ವಿಚಾರಗಳನ್ನು ತಿಳಿಸಲು ಮುಂದಾಗಿದ್ದೆವು. ಆದರೆ ಜನರ ಗಮನ ಬೇರೆಡೆ ಸೆಳೆಯಲು (ಡಿವಿಯೇಟ್ ಮಾಡಲು) ಉದ್ದೇಶಪೂರ್ವಕವಾಗಿ ಇದೇ ಸಮಯವನ್ನು ದಾಳಿಗೆ ಆಯ್ಕೆ ಮಾಡಿಕೊಂಡಿದ್ದಾರೆ,” ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಇನ್ನೂ ಅನೇಕರ ಮೇಲೆ ಇಡಿ ದಾಳಿ ನಡೆಯಬಹುದು

 “ಮುಂಬರುವ ದಿನಗಳಲ್ಲಿ ಇನ್ನೂ ಕೆಲವರ ಮೇಲೆ ಇ.ಡಿ ದಾಳಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಎಲ್ಲಾ ಮಂತ್ರಿಗಳಿಗೂ ಹಾಗೂ ಶಾಸಕರಿಗೂ ನಾನು ಆಗಲೇ ಎಚ್ಚರಿಕೆ ಗಂಟೆ ನೀಡಿದ್ದೇನೆ. ಅವರು ಯಾರನ್ನೂ ಬಿಡುವುದಿಲ್ಲ, ಕೇವಲ ಸುಳ್ಳು ಕಥೆಗಳನ್ನು ಕಟ್ಟುವುದು, ಸುಳ್ಳು ಆರೋಪ ಮಾಡುವುದು ಮತ್ತು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲರೂ ಬಹಳ ಹುಷಾರಾಗಿರಬೇಕು ಎಂದು ತಿಳಿಸಿದ್ದೇನೆ.”

“ಇಲ್ಲಿಯವರೆಗೆ ಯಾವೊಬ್ಬ ಬಿಜೆಪಿ ನಾಯಕನ ಮೇಲೂ ಇ.ಡಿ ದಾಳಿ ನಡೆದಿಲ್ಲ. ಈ ಹಿಂದೆ ನನ್ನನ್ನೂ ಎತ್ತಿಕೊಂಡು ಹೋಗಿ ಜೈಲಿನಲ್ಲಿಟ್ಟರು, ಆದರೆ ಏನಾಯಿತು? ಇವತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲರೂ ಸ್ವೀಕಾರ ಮಾಡಲೇಬೇಕಾದಂತಹ ಪರಿಸ್ಥಿತಿ, ಅನಿವಾರ್ಯತೆ ಬಂತು. ಅದೇ ರೀತಿ ಸತೀಶ್ ಜಾರಕಿಹೊಳಿ ಕೂಡ ನಮ್ಮ ರಾಜ್ಯಕ್ಕೆ, ನಮ್ಮ ಪಕ್ಷಕ್ಕೆ ಪ್ರಬಲವಾದ ನಾಯಕರು, ಅವರ ಬೆಳವಣಿಗೆಯನ್ನು ಸಹಿಸಲು ಅವರಿಂದ ಆಗುತ್ತಿಲ್ಲ,” ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
BJP Congress Congress Karnataka Dalit Leader DK Shivakumar ED Raid ED raid Karnataka Kannada News Online Karnataka Politics Sambrama Prabha Sambrama Prabha News Satish Jarkiholi ಇಡಿ ದಾಳಿ ಕರ್ನಾಟಕ ರಾಜಕೀಯ. ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ ಸತೀಶ್​ ಜಾರಕಿಹೊಳಿ
Add as Preferred on Google Follow on Google News
Share. WhatsApp Facebook Twitter Telegram
Previous Articleಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ
Next Article ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

September 2, 2026

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

September 2, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.