BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಬೆಳಗಾವಿ ಅಧಿವೇಶನಕ್ಕೆ ಮುನ್ನ ನಿಮ್ಮ ಕುರ್ಚಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ: ವಿಜಯೇಂದ್ರ

Author Picture
Published On: November 25, 2025

—Advertisement—

Updated By: Priyalachhi

ದಾವಣಗೆರೆ: ನಿಮ್ಮ ಕುರ್ಚಿ ಬಡಿದಾಟದಿಂದಾಗಿ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಬೆಳಗಾವಿ ಅಧಿವೇಶನಕ್ಕೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಉತ್ತರ ಸಿಗುತ್ತದೆ ಎಂದು ಜನರು ಕಾಯುತ್ತಿದ್ದಾರೆ. ಆದರೆ ಸಿಎಂ ಕುರ್ಚಿ ಕದನ ಶುರುಮಾಡಿಕೊಂಡಿದ್ದಾರೆ. ಅಧಿವೇಶನಕ್ಕೂ ಮುನ್ನವೇ ನಿಮ್ಮ ಕುರ್ಚಿ ಸಮಸ್ಯೆಗೆ ಪರಿಹಾರ ಕಂಡುಕೊಂಡು ಬನ್ನಿ. ಇಲ್ಲವಾದ್ರೆ ಅಧಿವೇಶನದಲ್ಲಿ ಜನರ ಸಮಸ್ಯೆಗೆ ಪರಿಹಾರ ಎಲ್ಲಿ ಸಿಗುತ್ತೆ?. ಅಧಿವೇಶನ ಮುಂದೂಡಿದರೂ ಪರವಾಗಿಲ್ಲ, ನಿಮ್ಮ ಕುರ್ಚಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ರಾಜ್ಯಾದ್ಯಂತ ಹೋರಾಟ ಮಾಡಿದರೂ ಕಿವಿಕೊಡುತ್ತಿಲ್ಲ. ಸರ್ಕಾರದ ವಿರುದ್ಧ ರೈತರ ಪರವಾಗಿ ಹೋರಾಟ ಮಾಡಲು ನಾವು ನಿರ್ಧಾರ ಮಾಡಿದ್ದೇವೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ತಿಂಗಳು 27, 28ಕ್ಕೆ ಹೋರಾಟ ಮಾಡಲು ಸಿದ್ಧರಾಗಿದ್ದೇವೆ. ಡಿಸೆಂಬರ್ 1ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸಲಿದ್ದೇವೆ. ಇಂದು ದಾವಣಗೆರೆಯಲ್ಲಿ ಹೋರಾಟಕ್ಕೆ ಚಾಲನೆ ನೀಡುತ್ತಿದ್ದೇವೆ ಎಂದು ಹೇಳಿದರು.

ಇಡೀ ಮಂತ್ರಿ ಮಂಡಲ ದೆಹಲಿಯಲ್ಲಿ ಕೂತಿದ್ದಾರೆ. ಕಬ್ಬು ಬೆಳೆಗಾರರು ಹೋರಾಟ ನಡೆಸುವ ವೇಳೆ ಕೃಷಿ ಸಚಿವರು ದೆಹಲಿಯಲ್ಲಿ ಕೂತಿದ್ದರು. ರಾಜ್ಯದ ಮತದಾರರು ನಮ್ಮನ್ನು ವಿಪಕ್ಷದಲ್ಲಿ ಕೂರಿಸಿದ್ದಾರೆ. ನಮ್ಮ ಕರ್ತವ್ಯವನ್ನು ನಾವು ಮಾಡುತ್ತೇವೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp