ಗೃಹಲಕ್ಷ್ಮಿ & ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ CM ಡಿಕೆಶಿ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನೈಜ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ. ನೂರಾರು ಕೋಟಿ ರೂ. ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ. ಗೃಹಜ್ಯೋತಿಗೂ ಉಚಿತ ವಿದ್ಯುತ್ ಪಡೆಯುತ್ತಿರುವ 1.64 ಲಕ್ಷ ಜನರೂ ಸಹ ಮರು ಅರ್ಜಿ ಸಲ್ಲಿಸಬೇಕು ಎಂದಿದ್ದಾರೆ.

