BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ನಾನಂತೂ ಬರೋಬ್ಬರಿ 100 ವರ್ಷ ಬದುಕುತ್ತೇನೆ

Author Picture
Published On: November 22, 2025

—Advertisement—

Updated By: Priyalachhi

ಮೈಸೂರು: ನನಗೀಗ 78 ವರ್ಷ ತುಂಬಿ, 79ನೇ ವರ್ಷ ನಡೆದಿದೆ. ನಾನಂತೂ ಕನಿಷ್ಠ ನೂರು ವರ್ಷ ಬಾಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಈಗ 79 ವರ್ಷ 4 ತಿಂಗಳು ಆಗಿದೆ. ನಾನಂತೂ 100 ವರ್ಷ ಬದುಕುತ್ತೇನೆ. ಗಾಂಧೀಜಿಗೆ ಒಬ್ರು ಪತ್ರ ಬರೆದು, 100 ವರ್ಷ ಬದುಕಿ ಅಂತ ಹೇಳಿದ್ದರು. ಆಗ ನಾನು 125 ವರ್ಷ ಬದುಕಬೇಕು ಅಂತಿದ್ದೇನೆ ಅಂತ ಗಾಂಧಿ ಉತ್ತರ ಕೊಟ್ಟಿದ್ದರು ಅಂತ ಸ್ಮರಿಸಿಕೊಂಡ್ರು. ನಾನೂ ಕೂಡ 100 ವರ್ಷ ಬದುಕುತ್ತೇನೆ ಎಂದು ನಗುತ್ತಾ ಸಿದ್ದರಾಮಯ್ಯ ಹೇಳಿದ್ರು.

ಜನರ ಆಶೀರ್ವಾದ ಇದ್ದಾಗಲಷ್ಟೇ ನಾವು ಅಧಿಕಾರದಲ್ಲಿರಲು ಸಾಧ್ಯ. ಒಟ್ಟು 16 ಚುನಾವಣೆ ಎದುರಿಸಿದ್ದು, ನಾಲ್ಕು ಬಾರಿ ಸೋತಿದ್ದೇನೆ’ ಎಂದರು. ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶುಕ್ರವಾರ ವಕೀಲ ರವಿವರ್ಮಕುಮಾರ್ ಅವರಿಗೆ, ‘ಡಿ.ದೇವರಾಜ ಅರಸು–ಎಲ್‌.ಜಿ. ಹಾವನೂರು’ ಪ್ರಶಸ್ತಿ ಪ್ರದಾನ ಮಾಡಿದರು.

ಹಿಂದೆ ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ, ಕೆಲ ಜ್ಯೋತಿಷಿಗಳು ಸಿ.ಎಂ ಸ್ಥಾನವೇ ಹೋಗುತ್ತದೆ ಎಂದಿದ್ದರು. ಆಗ ಐದು ವರ್ಷ ಅಧಿಕಾರ ಪೂರೈಸಿದೆ. ಈಗ ಎರಡನೇ ಅವಧಿಯಲ್ಲಿ ಎರಡೂವರೆ ವರ್ಷ ಕಳೆದಿದೆ. ರವಿವರ್ಮಕುಮಾರ್–ಶಾರದಾ ಅಮಾವಾಸ್ಯೆ ದಿನವೇ ಮದುವೆ ಆದವರು. ನಮ್ಮಲ್ಲಿನ ಮೂಢನಂಬಿಕೆಗಳನ್ನು ಬಿಡಬೇಕು ಎಂದರು. ನೀವೇ ಐದು ವರ್ಷ ಸಿ.ಎಂ ಆಗಿರಬೇಕು ಎಂದು ಅಭಿಮಾನಿಗಳು ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿ, ‘ಅದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ’ ಎಂದು ಸಿದ್ದರಾಮಯ್ಯ ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp