BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

KEA Exam | ಪರೀಕ್ಷೆ ಮುಗಿದ ಒಂದೇ ಗಂಟೆಯಲ್ಲಿ ಓಎಂಆರ್ ಶೀಟ್ ಪ್ರಕಟ

Author Picture
Published On: April 11, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೊಸ ದಾಖಲೆ ಬರೆದಿದೆ.

ಶುಕ್ರವಾರ ನಡೆದ ಲಿಖಿತ ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯಲ್ಲೇ ಅಭ್ಯರ್ಥಿಗಳ ಎಲ್ಲಾ ಓಎಂಆರ್ (OMR) ಶೀಟ್‌ಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಮೂಲಕ ಪಾರದರ್ಶಕತೆಗೆ ಸಾಕ್ಷಿಯಾಗಿದೆ.

ಬೆಂಗಳೂರಿನ 2 ಮತ್ತು ಧಾರವಾಡದ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆದವು. ಪರೀಕ್ಷೆ ಮುಗಿದ ತಕ್ಷಣವೇ ಆಯಾ ಕೇಂದ್ರಗಳಿಂದ ಓಎಂಆರ್ ಉತ್ತರ ಪತ್ರಿಕೆಗಳನ್ನು ತಂದು ಸ್ಕ್ಯಾನ್ ಮಾಡಲಾಯಿತು. ಬಳಿಕ ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಪರೀಕ್ಷಾ ಕೇಂದ್ರವಾರು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ.
“ಪರೀಕ್ಷೆ ಮುಗಿದ ಕ್ಷಣದಿಂದಲೇ ಕಾರ್ಯಪ್ರವೃತ್ತರಾದ ತಂಡವು ದಾಖಲೆ ಸಮಯದಲ್ಲಿ ಸ್ಕ್ಯಾನಿಂಗ್ ಪ್ರಕ್ರಿಯೆ ಮುಗಿಸಿದೆ. ಯಾರು ಬೇಕಾದರೂ ಈಗ ವೆಬ್‌ಸೈಟ್‌ನಲ್ಲಿ ತಮ್ಮ ಉತ್ತರ ಪತ್ರಿಕೆಗಳನ್ನು ವೀಕ್ಷಿಸಬಹುದು. ಇದು ಕೆಇಎ ಅಳವಡಿಸಿಕೊಂಡಿರುವ ಅತ್ಯಂತ ಪಾರದರ್ಶಕ ಕ್ರಮವಾಗಿದೆ” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯಬಹುದಾದ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಅಭ್ಯರ್ಥಿಗಳಲ್ಲಿ ವಿಶ್ವಾಸ ಮೂಡಿಸಲು ಕೆಇಎ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಇದೇ ಕ್ರಮವನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಳವಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp