BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಸಿಎಂ ಮಾಧ್ಯಮ ಸಲಹೆಗಾರರ ಹುದ್ದೆ ಹೂವಿನ ಹಾದಿಯಲ್ಲ, ಮುಳ್ಳಿನ ಹಾಸಿಗೆ: ಕೆ.ವಿ.ಪ್ರಭಾಕರ್

Author Picture
Published On: May 22, 2026

—Advertisement—

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರೀ ಕೆ.ವಿ. ಪ್ರಭಾಕರ್ ಅವರೊಂದಿಗೆ ಮಾಧ್ಯಮ ಸಂವಾದ ಏರ್ಪಡಿಸಲಾಗಿತ್ತು. ಇದೇ ವೇಳೆ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ವಿ. ಪ್ರಭಾಕರ್‌, “ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಆದ್ಯತೆಯಾಗಿವೆ. ನಿಯಮಿತವಾಗಿ ಶ್ರಮಪಟ್ಟು ಪತ್ರಿಕೆ ಮುದ್ರಿಸುತ್ತಿರುವವರಿಗೆ ಸರ್ಕಾರದ ಹೊಸ ಜಾಹೀರಾತು ನೀತಿಯಿಂದ ನೆರವಾಗಲಿದೆ,” ಎಂದು ಭರವಸೆ ನೀಡಿದರು.

ತಮ್ಮ ಜವಾಬ್ದಾರಿಯ ಬಗ್ಗೆ ಮಾತನಾಡಿದ ಅವರು, “ಮಾಧ್ಯಮ ಸಲಹೆಗಾರರ ಹೊಣೆಗಾರಿಕೆ ಎನ್ನುವುದು ಹೂವಿನ ಹಾದಿಯಲ್ಲ, ಅದೊಂದು ಮುಳ್ಳಿನ ಹಾಸಿಗೆ,” ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನುಮ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related News

Leave a Comment

Home
Web Stories
Instagram
WhatsApp