ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರೀ ಕೆ.ವಿ. ಪ್ರಭಾಕರ್ ಅವರೊಂದಿಗೆ ಮಾಧ್ಯಮ ಸಂವಾದ ಏರ್ಪಡಿಸಲಾಗಿತ್ತು. ಇದೇ ವೇಳೆ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ವಿ. ಪ್ರಭಾಕರ್‌, “ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಆದ್ಯತೆಯಾಗಿವೆ. ನಿಯಮಿತವಾಗಿ ಶ್ರಮಪಟ್ಟು ಪತ್ರಿಕೆ ಮುದ್ರಿಸುತ್ತಿರುವವರಿಗೆ ಸರ್ಕಾರದ ಹೊಸ ಜಾಹೀರಾತು ನೀತಿಯಿಂದ ನೆರವಾಗಲಿದೆ,” ಎಂದು ಭರವಸೆ ನೀಡಿದರು.

ತಮ್ಮ ಜವಾಬ್ದಾರಿಯ ಬಗ್ಗೆ ಮಾತನಾಡಿದ ಅವರು, “ಮಾಧ್ಯಮ ಸಲಹೆಗಾರರ ಹೊಣೆಗಾರಿಕೆ ಎನ್ನುವುದು ಹೂವಿನ ಹಾದಿಯಲ್ಲ, ಅದೊಂದು ಮುಳ್ಳಿನ ಹಾಸಿಗೆ,” ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನುಮ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share.
Leave A Reply

Exit mobile version