BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

,

‘ಟಾಕ್ಸಿಕ್’ ಚಿತ್ರದ ಎದುರು ಬರಲು ‘ಲವ್ ಆ್ಯಂಡ್ ವಾರ್’ ಹಿಂದೇಟು

Author Picture
Published On: November 4, 2025

—Advertisement—

Updated By: Priyalachhi

ಯಶ್ ನಟನೆಯ ‘ಕೆಜಿಎಫ್’ ಎದುರು ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಜೀರೋ’ ಸಂಪೂರ್ಣವಾಗಿ ಝೀರೋನೆ ಆಯಿತು. ‘ಕೆಜಿಎಫ್ 2’ ಎದುರು ಬಂದ ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ ರಿಲೀಸ್ ಆಗಿ ಸ್ಪರ್ಧೆ ಮಾಡಲಾಗದೆ ಸೋತಿತು. ಈಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮುಂದಿನ ಮಾರ್ಚ್ 19ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಎದುರು ಬರಬೇಕು ಎಂದುಕೊಂಡವರು ಈಗಾಗಲೇ ಕಾಲ್ಕೀಳುತ್ತಿದ್ದಾರೆ. ಬಾಲಿವುಡ್​ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಕೂಡ ಹೀಗೆಯೇ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಬನ್ಸಾಲಿ ಅವರು ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ವಿಕ್ಕಿ ಕೌಶಲ್ ಜೊತೆ ಸೇರಿ ‘ಲವ್ ಆ್ಯಂಡ್ ವಾರ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ 2026ರ ಈದ್​ಗೆ (ಮಾರ್ಚ್ 19) ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಬನ್ಸಾಲಿ ಈ ವಿಚಾರದಲ್ಲಿ ಹಿಂದೇಟು ಹಾಕುತ್ತಿದ್ದಾರಂತೆ.

‘ಟಾಕ್ಸಿಕ್’ ಸಿನಿಮಾ ಬಜೆಟ್ ಹಾಗೂ ಮೇಕಿಂಗ್ ವಿಚಾರಕ್ಕೆ ಸದ್ದು ಮಾಡುತ್ತಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಇಂಗ್ಲಿಷ್​​ನಲ್ಲೂ ಶೂಟ್ ಆಗುತ್ತಿದೆ. ಇದು ತೆಲುಗು, ತಮಿಳು ಮೊದಲಾದ ಭಾಷೆಗಳಲ್ಲಿ ಡಬ್ ಆಗಿ ತೆರೆಗೆ ಬರಲಿದೆ. ಹಿಂದಿ ಭಾಷೆಯಲ್ಲಿ ಈ ಸಿನಿಮಾನ ರಿಲೀಸ್ ಮಾಡುವ ಹಕ್ಕನ್ನು ಪಡೆಯಲು ಅನೇಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಇದೆಲ್ಲವನ್ನೂ ಗಮನಿಸಿ ಬನ್ಸಾಲಿ ಅವರು ತಮ್ಮ ಸಿನಿಮಾನ ಮುಂದಕ್ಕೆ ಹಾಕಿಕೊಳ್ಳುವ ಆಲೋಚನೆಯಲ್ಲಿ ಇದ್ದಾರೆ.

‘ಲವ್ ಆ್ಯಂಡ್ ವಾರ್’ ಸಿನಿಮಾದ ಶೂಟಿಂಗ್​ನಲ್ಲಿ ಬನ್ಸಾಲಿ ನಿಧಾನತೆ ತೋರುತ್ತಿದ್ದಾರೆ. ಹೀಗಾಗಿ, ಸಿನಿಮಾ ಪೂರ್ಣಗೊಳ್ಳೋದು ಮುಂದಿನ ಏಪ್ರಿಲ್ ಸಮೀಪಿಸಲಿದೆ. ಹೀಗಾಗಿ, ರಿಲೀಸ್​ ಡೇಟ್​ನ ಐಪಿಎಲ್ ಮುಗಿದ ಮೇಲೆ ಅಂದರೆ 2026ರ ಜೂನ್​ಗೆ ಮುಂದೂಡುವ ಆಲೋಚನೆ ಬನ್ಸಾಲಿಗೆ ಇದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp