Updated By: Priyalachhi

ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಘೋಷಿಸಿದ್ದಾರೆ.

‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ ಮೇ ತಿಂಗಳಲ್ಲಿ ಆರಂಭವಾಗಲಿದೆ. ಈ ಮಾರ್ಗವು 13.76 ಕಿ.ಮೀ. ಭೂಗತ ಮಾರ್ಗವನ್ನು ಹೊಂದಿದ್ದು, ಸಂಚಾರ ಸುಗಮವಾಗಲಿದೆ’ ಎಂದಿದ್ದಾರೆ.

‘ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ! ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ 13.76 ಕಿಮೀ ಉದ್ದದ ಮಾರ್ಗವು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುತ್ತದೆ’ ಎಂದು ಅವರು ಹೇಳಿದರು.

ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ. ಇದು ಅತಿ ಉದ್ದದ ಭೂಗತ ಮಾರ್ಗವಾಗಿದೆ. ಈ ಸುರಂಗದಲ್ಲಿ 12 ನಿಲ್ದಾಣಗಳು ಇವೆ. ಇನ್ನುಳಿದ ಆರು ನಿಲ್ದಾಣಗಳು ಎಲ್ಲರಿಸಿದ ಮಾರ್ಗದಲ್ಲಿ ಇವೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version