Updated By: Priyalachhi

ಕೃಷ್ಣಗಿರಿಮಹಿಳೆಯೊಬ್ಬಳ ಸಲಿಂಗ ಕಾಮದ ದಾಹಕ್ಕೆ 5 ತಿಂಗಳ ಮಗು ಬಲಿಯಾಗಿರುವ ಘಟನೆ ತಡವಾಗಿ ಬಹಿರಂಗವಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಭಾರತಿ (26) ತಾನೇ ಹೆತ್ತ ಮಗುವನ್ನು ಹತ್ಯೆ ಮಾಡಿರುವ ಮಹಿಳೆಯಾಗಿದ್ದು, ಸ್ನೇಹಿತೆ ಸುಮಿತ್ರ ಜೊತೆ ಮಾತನಾಡುವುದಕ್ಕೆ ಮಗು ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾಳೆ.

ಭಾರತಿ ತನ್ನ ಗಂಡ ಕೆಲಸಕ್ಕೆ ಹೋಗ್ತಿದ್ದಂತೆ ಸ್ನೇಹಿತೆ ಸುಮಿತ್ರ ಮನೆಗೆ ತೆರಳುತ್ತಿದ್ದಳು. ಆದರೆ ಮಗು ಹುಟ್ಟಿದ ಬಳಿಕ ಸಂಪರ್ಕಕ್ಕೆ ಸಮಸ್ಯೆಯಾಗುತ್ತಿದೆ ಎಂದು ಸುಮಿತ್ರ ಕೊರಗುತ್ತಿದ್ದಳಂತೆ. ದಿನಕಳೆದಂತೆ ಮಗುವಿನಿಂದಾಗಿಯೇ ತನ್ನಿಂದ ಭಾರತಿ ದೂರವಾಗುತ್ತಿದ್ದಾಳೆ ಎಂದು ಭಾವಿಸಿದ್ದ ಸುಮಿತ್ರ, ಮಗುವನ್ನು ಹತ್ಯೆ ಮಾಡುವಂತೆ ಭಾರತಿಗೆ ಒತ್ತಡ ಹೇರಿದ್ದಳು. ಸುಮಿತ್ರ ಮಾತು ಕೇಳಿ ಭಾರತಿ ಮಗುವನ್ನೇ ಕೊಲ್ಲುವ ನಿರ್ಧಾರ ಮಾಡಿದ್ದಾಳೆ.

ಸುರೇಶ್ ಮತ್ತು ಭಾರತಿ ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಗುವಿತ್ತು. ಆದರೂ ಈಕೆ ಅದೇ ಪ್ರದೇಶದಲ್ಲಿದ್ದ ಯುವತಿ ಸುಮಿತ್ರಾ ಜೊತೆ ಸಂಬಂಧ ಹೊಂದಿದ್ದಳು. ಇವರಿಬ್ಬರ ಸ್ನೇಹ ಸಲಿಂಗ ಕಾಮಕ್ಕೆ ತಿರುಗಿತ್ತು. ಪತಿ ಇಲ್ಲದೆ ಇದ್ದಾಗ ಮನೆಯಲ್ಲಿ ಸೇರುತ್ತಿದ್ದರಂತೆ. ಕಳೆದ ನಾಲ್ಕು ವರ್ಷಗಳಿಂದ ಇಬ್ಬರು ಸಲಿಂಗ ಕಾಮಿಗಳಾಗಿದ್ದರು ಎನ್ನಲಾಗ್ತಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version