Updated By: Priyalachhi

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಡೈರಿಯನ್ನು ಸೋಮವಾರ ಸಲ್ಲಿಸಿದ್ದಾರೆ.

ಮುಡಾ ಸೈಟ್ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಬೆಂಗಳೂರಿನ ಸೆಷನ್ಸ್ ಕೋರ್ಟ್’ನಲ್ಲಿ ನಡೆಯಿತು.

ವಿಚಾರಣೆ ವೇಳೆ ಪ್ರಕರಣದ ತನಿಖೆ ಕೈಕೊಂಡಿರುವ ಲೋಕಾಯುಕ್ತ ಪೊಲೀಸರು ಕೇಸ್ ಡೈರಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರಿಗೆ ಸಲ್ಲಿಕೆ ಮಾಡಿದರು.

ವಿಚಾರಣೆ ವೇಳೆ ವಾದ ಮಂಡಿಸಿದ ದೂರದಾರ ಸ್ನೇಹಮಯಿ ಕೃಷ್ಣ ಅವರು, ತನಿಖೆ ಪೂರ್ಣಗೊಂಡಿದ್ದರೂ, ಬಾಕಿ ಇದೆ ಅಂತ ಅಧಿಕಾರಿಗಳು ಸುಳ್ಳು ಹೇಳಿದ್ದಾರೆ. ಎ1 ಹಾಲಿ ಸಿಎಂ ಅವರನ್ನು ನಿರಪರಾಧಿ ಅಂತ ತೋರಿಸುವ ಪ್ರಯತ್ನ ನಡೀತಿದೆ. ಆರೋಪ ಸಾಬೀತಾದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತೆ ಅಂದರು. ತನಿಖಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೇ ಪ್ರಕರಣ ದಾಖಲಿಸಲು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿತು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version