• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮತ್ತೆ ನಂದಿನಿ ಹಾಲಿನ ದರ ಏರಿಕೆ

Sambrama Prabha News by Sambrama Prabha News
November 5, 2025
in Home, Latest News
0
ಮತ್ತೆ ನಂದಿನಿ ಹಾಲಿನ ದರ ಏರಿಕೆ

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಬುಧವಾರ ಮಾಹಿತಿ ನೀಡಿದ್ದಾರೆ.

ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ‌ ಹೆಚ್ಚಿದೆ. ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಇಷ್ಟು ಅಂತ ದರದ ಬಗ್ಗೆ ಹೇಳಿಲ್ಲ. ಅರ್ಧ ಲೀಟರ್ ಮಾರಿದರೆ ನಷ್ಟವಾಗುತ್ತದೆ.

ಒಂದು ಲೀಟರ್ ಹಾಲು ಮಾರಿದರೆ ಲಾಭ ಆಗುತ್ತದೆ. ತುಪ್ಪ ಇವತ್ತು ದರ ಏರಿಕೆ ಮಾಡಲಾಗಿದ್ದು, ಬೇರೆ ಕಂಪನಿಯ ಹಾಲು ಆನ್‌ಲೈನ್‌ ಮಾರ್ಕೆಟಿಂಗ್ ಜಾಸ್ತಿ ಆಗಿದ್ದು, ನಾವು ರೈತರಿಗೆ ಹಾಲು ಕೂಡಲೇ ಹಣ ಕೊಡಬೇಕು. ಬೇರೆ ರಾಜ್ಯಗಳು ಹೆಚ್ಚು ಹಣ ಬಾಕಿ ಉಳಿಸಿಕೊಂಡಿಲ್ಲ ಅನ್ಸುತ್ತೆ ಎಂದು ಡಿಕೆ ಸುರೇಶ್ ಹೇಳಿದರು.

50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದಲೇ ರೈತರಿಗೆ ಹಣ ಕೊಡುತ್ತಿದ್ದೇವೆ

ನಮ್ಮಲ್ಲಿ 95 ಲಕ್ಷದಿಂದ 1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗುತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಆಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರುಪಾಯಿಯನ್ನ ರೈತರಿಗೆ ಕೊಡಲು ಸೂಚಿಸಿದ್ದೇವೆ.

50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆ ಹಣ ಕೊಡುತ್ತಿದ್ದೇವೆ. ಸದ್ಯ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು ಈಗ ನಾವು ತುಪ್ಪಕ್ಕೆ ನಿಗದಿ ಮಾಡಿರುವ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದರು.

ಒಕ್ಕೂಟಗಳ ಮನವಿ ಮೇರೆಗೆ ತುಪ್ಪದ ದರ ಜಾಸ್ತಿ ಮಾಡಲಾಗಿದೆ. ಹಾಲಲ್ಲೂ ಕೆಲವು ಕಡೆ ನಮಗೆ ನಷ್ಟವಾಗುತ್ತಿದೆ. ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ನೋಡಬೇಕಿದೆ. ನಮಗೆ ಹಾಲು ಉತ್ಪಾದಕರು ಹಾಗೂ ಒಕ್ಕೂಟಗಳು ದರ ಹೆಚ್ಚಳಕ್ಕೆ ಮನವಿ ಮಾಡಿದ್ದಾರೆ. ಹಾಲು ದರ ಏರಿಕೆ ಮಾಡಲು ಮನವಿ ಮಾಡಿದ್ದೇವೆ.

Tags: Nandini milkದರ ಏರಿಕೆ
Previous Post

ಡಿಸೆಂಬರ್ ನಿಂದ ರಷ್ಯಾ ಕಚ್ಚಾ ತೈಲ ಆಮದು ಕಡಿತ

Next Post

ಮದ್ಯ ಸೇವನೆ ಮಾಡಿ ಬರುತ್ತಿದ್ದ ಚಾಲಕರಿಂದ ಲಂಚ; BMTC ಅಧಿಕಾರಿಗಳು ಅಮಾನತು!

Next Post
ಮದ್ಯ ಸೇವನೆ ಮಾಡಿ ಬರುತ್ತಿದ್ದ ಚಾಲಕರಿಂದ ಲಂಚ; BMTC ಅಧಿಕಾರಿಗಳು ಅಮಾನತು!

ಮದ್ಯ ಸೇವನೆ ಮಾಡಿ ಬರುತ್ತಿದ್ದ ಚಾಲಕರಿಂದ ಲಂಚ; BMTC ಅಧಿಕಾರಿಗಳು ಅಮಾನತು!

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.