ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಅವರ ಸ್ಥಾನದಿಂದ ತೆಗೆದುಹಾಕಿತ್ತು. ಇದೇ ವಿಷಯಕ್ಕೆ ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಸ್ವರೂಪ ಪಡೆದುಕೊಂಡ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version