• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Sambrama Prabha News by Sambrama Prabha News
November 19, 2025
in Latest News, Politics
0
ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Updated By: Priyalachhi

ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದರು.

ಮೇಕೆದಾಟು ಯೋಜನೆ ಕಚೇರಿ: ಡಿಪಿಆರ್ ಮರು ಸಲ್ಲಿಕೆ ಮಾಡಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು. ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ತಯಾರು ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಮತ್ತೆ ಹೊಸದಾಗಿ ಡಿಪಿಆರ್ ಮಾಡಬೇಕೇ, ಇದನ್ನು ಜಲ ಆಯೋಗದ ಮುಂದೆ ಮಂಡಿಸುವಿರಾ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮಂಡಿಸುತ್ತೀರಾ ಎಂದು ಕೇಳಿದಾಗ, ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಿದ್ದರು. ಹೀಗಾಗಿ ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ ಹೊಸದಾಗಿ ಡಿಪಿಆರ್ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ ಎಂದರು. ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುವಿರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ದೆಹಲಿಗೆ ಹೋಗುವ ಯಾವ ಆಲೋಚನೆಯೂ ಇಲ್ಲ ಎಂದು ತಿಳಿಸಿದರು.

ತುಮಕೂರಿಗೆ ಮೆಟ್ರೋ ಸಾಧ್ಯತೆಗಳ ಬಗ್ಗೆ ಅಧ್ಯಯನ: ತುಮಕೂರು ಮೆಟ್ರೋ ಮಾರ್ಗಕ್ಕೆ ವಿರೋಧ ವ್ಯಕ್ತವಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅಲ್ಲಿನ ಜನಪ್ರತಿನಿಧಿಗಳು ನನ್ನ ಬಳಿ ಬಂದು ಮನವಿ ಮಾಡಿದಾಗ ನಾನು ಅದರ ಸಾಧ್ಯತೆಗಳ ಬಗ್ಗೆ ತಿಳಿಯಲು ಮುಂದಾಗಿದ್ದೇವೆ. ಇದರಲ್ಲಿ ಟೀಕೆ ಮಾಡುವಂತಹದ್ದು ಏನಿದೆ? ನಮ್ಮ ಗೃಹ ಸಚಿವರು ಸೇರಿದಂತೆ ಕೆಲವರು ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಇದಕ್ಕೆ ಯಾರಾದರೂ ಬಂಡವಾಳ ಹಾಕಲು ಮುಂದೆ ಬರುತ್ತಾರಾ? ಬಂದರೆ ಯಾವೆಲ್ಲಾ ಮಾರ್ಗ ಇವೆ ಎಂಬುದರ ಬಗ್ಗೆ ಅಧ್ಯಯನ ಮಾಡಬೇಕಿದೆ. ಯಾರಾದರೂ ಚಂದ್ರಲೋಕಕ್ಕೆ ಹೋಗಬೇಕು ಎಂದರೆ ಅದು ಸಾಧ್ಯವೇ, ಇಲ್ಲವೇ ಎಂದು ಪರಿಶೀಲಿಸಬೇಕಲ್ಲವೇ ಎಂದು ಹೇಳಿದರು.

Tags: ಡಿಸಿಎಂ ಡಿ.ಕೆ. ಶಿವಕುಮಾರ್ಮೇಕೆದಾಟು ಯೋಜನೆ
Previous Post

ಈ ಅಕ್ಕಿ ಬೆಲೆ ಬಂಗಾರಕ್ಕಿಂತಲೂ ತುಂಬಾ ದುಬಾರಿ

Next Post

ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

Next Post
ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.