Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!
Exclusive Latest News Special News

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ಗ್ರಾಹಕರಿಗೆ ಕಣ್ಣೀರು, ಇತ್ತ ರೈತರಿಗೂ ತಪ್ಪಿಲ್ಲ ಕಣ್ಣೀರು!
Sub EditorBy Sub EditorAugust 26, 2026No Comments2 Mins Read
Share Facebook Twitter Pinterest Copy Link Telegram LinkedIn Tumblr Email
ಈರುಳ್ಳಿ ದರ ದಿಢೀರ್ ಏರಿಕೆ
Share
Facebook Twitter LinkedIn Pinterest Email

ಸಾಲು ಸಾಲು ಹಬ್ಬಗಳು ಹತ್ತಿರ ಬರುತ್ತಿರುವ ಈ ಹೊತ್ತಿನಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಅಡುಗೆಮನೆಯ ‘ಕಿಂಗ್’ ಎಂದೇ ಕರೆಸಿಕೊಳ್ಳುವ ಈರುಳ್ಳಿ ದರ ಈಗ ಧಿಡೀರನೆ ಗಗನಮುಖಿಯಾಗಿದೆ. ಕೇವಲ ಒಂದು ತಿಂಗಳ ಹಿಂದಷ್ಟೇ ಕೆ.ಜಿ.ಗೆ 20-30 ರೂಪಾಯಿಗೆ ಸಿಗುತ್ತಿದ್ದ ಈರುಳ್ಳಿ, ಈಗ 60-85 ರೂಪಾಯಿ ಗಡಿ ದಾಟಿದೆ! ಮಾರುಕಟ್ಟೆಯ ಟ್ರೆಂಡ್ ನೋಡಿದರೆ ಮುಂದಿನ ದಿನಗಳಲ್ಲಿ ಶತಕ ಬಾರಿಸಿದರೂ ಅಚ್ಚರಿಯಿಲ್ಲ.

ಗ್ರಾಹಕರಿಗೆ ಕಣ್ಣೀರು, ಇತ್ತ ರೈತರಿಗೂ ತಪ್ಪಿಲ್ಲ ಕಣ್ಣೀರು! ಸಾಮಾನ್ಯವಾಗಿ ಬೆಲೆ ಏರಿಕೆಯಾದರೆ ಬೆಳೆಗಾರನಿಗೆ ಖುಷಿಯಾಗುತ್ತದೆ. ಆದರೆ, ಈ ಬಾರಿ ದರ ಹೆಚ್ಚಾದರೂ ಅನ್ನದಾತನ ಮುಖದಲ್ಲಿ ಮಂದಹಾಸವಿಲ್ಲ. ಇದಕ್ಕೆ ಮುಖ್ಯ ಕಾರಣ ‘ಬರ ಮತ್ತು ಮಳೆ ಕೊರತೆ’. ರಾಜ್ಯದ ಪ್ರಮುಖ ಈರುಳ್ಳಿ ಬೆಳೆಯುವ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಇಳುವರಿ ಸಂಪೂರ್ಣ ಕುಸಿದಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಯಾವ ಜಿಲ್ಲೆಯಲ್ಲಿ ಪರಿಸ್ಥಿತಿ ಹೇಗಿದೆ?

  • ಚಿತ್ರದುರ್ಗದ ರೈತರ ಸಂಕಷ್ಟ: ಪ್ರತಿ ವರ್ಷ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಇಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತಿತ್ತು. ಆದರೆ ಮಳೆ ಕೊರತೆಯಿಂದ ಈ ಬಾರಿ ಕೇವಲ ಅರ್ಧದಷ್ಟು ಮಾತ್ರ ಬಿತ್ತನೆಯಾಗಿದೆ. “ಮೊದಲೆಲ್ಲಾ 30 ರೂಪಾಯಿಗೆ ಮಾರಿದರೂ ನಷ್ಟವಾಗುತ್ತಿರಲಿಲ್ಲ, ಆದರೆ ಈಗ ಇಳುವರಿಯೇ ಇಲ್ಲದಿರುವುದರಿಂದ 80 ರೂಪಾಯಿಗೆ ಮಾರಿದರೂ ನಮಗೆ ನಯಾಪೈಸೆ ಉಳಿಯುತ್ತಿಲ್ಲ” ಎಂದು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

  • ಬಳ್ಳಾರಿಗೆ ಆಂಧ್ರದ ಈರುಳ್ಳಿಯೇ ಗತಿ: ಸಿರುಗುಪ್ಪ, ಸಂಡೂರು ಭಾಗಗಳಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯಲಾಗುತ್ತಿತ್ತು. ಆದರೆ ಈ ವರ್ಷ ಭೀಕರ ಬರಗಾಲದಿಂದ ರೈತರು ಈರುಳ್ಳಿಯನ್ನೇ ಬೆಳೆದಿಲ್ಲ. ಪರಿಣಾಮ, ಬಳ್ಳಾರಿ ಎಪಿಎಂಸಿಗೆ ಪಕ್ಕದ ಆಂಧ್ರಪ್ರದೇಶ ಹಾಗೂ ವಿಜಯಪುರದಿಂದ ಈರುಳ್ಳಿ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಬಂದೊದಗಿದೆ.

  • ಗದಗ, ಯಾದಗಿರಿ ಸ್ಥಿತಿ ಶೋಚನೀಯ: ಗದಗ ನಗರದ ಹೊರವಲಯದಲ್ಲಿ ಬಿತ್ತನೆ ಮಾಡಿ ಒಂದೂವರೆ ತಿಂಗಳಾದರೂ ಮಳೆಯಿಲ್ಲದೆ ಈರುಳ್ಳಿ ಮೊಳಕೆಯೊಡೆದು ನೆಲದಿಂದ ಮೇಲಕ್ಕೆ ಬಂದೇ ಇಲ್ಲ. ಇನ್ನು ಯಾದಗಿರಿ ಜಿಲ್ಲೆಯ ಗುಲಗುಂಜಿ ಸೇರಿದಂತೆ ಹಲವೆಡೆ ಬಿತ್ತನೆಯೇ ವಿಳಂಬವಾಗಿದೆ. ಇತ್ತೀಚೆಗಷ್ಟೇ ಬೆಳೆ ಹಾಕಿದ್ದು, ದೀಪಾವಳಿ ವೇಳೆಗೆ ಫಸಲು ಬರುವ ನಿರೀಕ್ಷೆ ಇದೆ.

  • ಬಾಗಲಕೋಟೆ ರೈತರ ಆತಂಕ: ಭಗವತಿ, ಬೇವೂರು, ಬೆನಕಟ್ಟಿ ಭಾಗದ ರೈತರು ಅಲ್ಪಸ್ವಲ್ಪ ಬೆಳೆ ಉಳಿಸಿಕೊಂಡಿದ್ದರೂ ಆತಂಕದಲ್ಲೇ ದಿನ ದೂಡುತ್ತಿದ್ದಾರೆ. “ನಾವು ಕಷ್ಟಪಟ್ಟು ಮಾರುಕಟ್ಟೆಗೆ ಫಸಲು ತರುವ ಹೊತ್ತಿಗೆ ದಲ್ಲಾಳಿಗಳು ಧಾರಣೆ ಕುಸಿಯುವಂತೆ ಮಾಡುತ್ತಾರೆ, ಆಗ ನಾವೇನು ಮಾಡಬೇಕು?” ಎಂಬುದು ರೈತ ಕಾರ್ಮಿಕರ ಪ್ರಶ್ನೆಯಾಗಿದೆ.

ಎಪಿಎಂಸಿಗಳಲ್ಲಿ ಸದ್ಯದ ದರ ಎಷ್ಟಿದೆ?

ದಾವಣಗೆರೆ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಸದ್ಯ 40 ರಿಂದ 50 ರೂಪಾಯಿಗೆ ಸಗಟು (Wholesale) ದರದಲ್ಲಿ ಈರುಳ್ಳಿ ಮಾರಾಟವಾಗುತ್ತಿದ್ದರೆ, ಚಿಲ್ಲರೆ (Retail) ಮಾರುಕಟ್ಟೆಯಲ್ಲಿ ಇದು 60-70 ರೂಪಾಯಿಗೆ ತಲುಪಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿ.ಗೆ 80-85 ರೂ. ವರೆಗೂ ಬಿಕರಿಯಾಗುತ್ತಿದೆ.

ಒಂದೆಡೆ ಬೆಲೆ ಏರಿಕೆಯ ಬಿಸಿಯಿಂದ ಗ್ರಾಹಕರು ಈರುಳ್ಳಿ ಖರೀದಿಸಲು ಹಿಂದೇಟು ಹಾಕುತ್ತಿದ್ದರೆ, ಇನ್ನೊಂದೆಡೆ ಹಾಕಿದ ಬಂಡವಾಳವೂ ವಾಪಸ್ ಬಾರದೆ ಅನ್ನದಾತ ನರಳುತ್ತಿದ್ದಾನೆ. ಪ್ರಕೃತಿಯ ಮುನಿಸಿಗೆ ಸಿಲುಕಿರುವ ರೈತರಿಗೆ ಸರ್ಕಾರ ಸೂಕ್ತ ಬೆಂಬಲ ಅಥವಾ ಪರಿಹಾರ ಒದಗಿಸುತ್ತಾ ಎಂಬುದನ್ನ ಕಾದುನೋಡಬೇಕಿದೆ.

(ತಾಜಾ ಹಾಗೂ ನಿಖರ ಕೃಷಿ ಸುದ್ದಿಗಳು ಮತ್ತು ಮಾರುಕಟ್ಟೆ ಮಾಹಿತಿಗಾಗಿ ಸಂಭ್ರಮ ಪ್ರಭಾ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರಿ.)

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
APMC Market Onion prices Chitradurga Onion crop Karnataka farmers news Onion price hike in Karnataka Onion rate today Sambrama Prabha News ಈರುಳ್ಳಿ ದರ ಈರುಳ್ಳಿ ಬೆಲೆ ಏರಿಕೆ
Add as Preferred on Google Follow on Google News Follow on Flipboard
Share. Facebook Twitter Pinterest LinkedIn Tumblr Email Copy Link
Previous Articleನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods
Sub Editor
  • Website

Related Posts

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.