Updated By: Priyalachhi

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಕಾರು ಸ್ಫೋಟಗೊಂಡು 10ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಕಾರು ಛಿದ್ರಗೊಂಡು ಹಲವಾರು ವಾಹನಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ ಮತ್ತು ಇದು ಉಗ್ರರ ಕೃತ್ಯ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version