• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಥರ್ಡ್‌ ಕ್ಲಾಸ್‌ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಲು ಸಾಧ್ಯ: ಅಸ್ಸಾಂ CM ಹಿಮಂತ ಶರ್ಮಾಗೆ ಪ್ರಿಯಾಂಕ್ ತಪರಾಕಿ

Sambrama Prabha News by Sambrama Prabha News
October 30, 2025
in Nation News
0
priyank

ಬೆಂಗಳೂರು: ತಮ್ಮನ್ನು ಮೊದಲ ದರ್ಜೆಯ ಮುಠ್ಠಾಳ ಎಂದು ಕರೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಒಬ್ಬ ಮೂರನೇ ದರ್ಜೆ ವಂಚಕ ಎಂದು ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಅಸ್ಸಾಂನಲ್ಲಿ ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಅನುಮತಿ ದೊರೆತ ವಿಚಾರವಾಗಿ ಇಬ್ಬರು ನಾಯಕರ ನಡುವೆ ವಾಗ್ವಾದ ನಡೆಯುತ್ತಿದ್ದು, ವೈಯಕ್ತಿಕ ನಿಂದನೆಗೆ ಇಳಿಯುವವರೆಗೆ ತಲುಪಿದೆ. ದೊಡ್ಡ ಕೈಗಾರಿಕೆಗಳ ಸ್ಥಾಪಿಸಲು ಈಶಾನ್ಯ ರಾಜ್ಯಗಳಲ್ಲಿ ಪ್ರತಿಭೆಗಳ ಕೊರೆತೆಯಿದೆ ಎಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಸ್ವಾ, ಪ್ರಿಯಾಂಕ್ ಅವರನ್ನು ‘ಫಸ್ಟ್ ಕ್ಲಾಸ್ ಮುಠ್ಠಾಳ’ ಎಂದು ಕರೆದಿದ್ದರು.

ಈ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, ಅಸ್ಸಾಂ ಸಿಎಂ ಒಬ್ಬ ‘ಮೂರನೇ ದರ್ಜೆ ವಂಚಕ’ ಎಂದು ಲೇವಡಿ ಮಾಡಿದ್ದಾರೆ. ಬಿಸ್ವಾ ಅವರ ಭಾಷೆ ಅವರ ಹತಾಶೆಯನ್ನು ತೋರಿಸುತ್ತದೆ. ಇದು ಅವರ ವರ್ಗದ ವಿಶೇಷ ಹಕ್ಕು ಮತ್ತು ಅವರು ಅಧಿಕಾರದಲ್ಲಿರುವುದರಿಂದ ಪಡೆದ ವಿಶೇಷ ಹಕ್ಕನ್ನು ತೋರಿಸುತ್ತದೆ. ಇಲ್ಲದಿದ್ದರೆ, ಇದರಲ್ಲಿ ಏನೂ ಇಲ್ಲ, ಮೂರನೇ ದರ್ಜೆಯ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಬಹುದು ಎಂದು ಪ್ರಿಯಾಂಕ್‌ ತಿರುಗೇಟು ನೀಡಿದ್ದಾರೆ.

ಅವರು ನನ್ನ ಹೇಳಿಕೆಯನ್ನು ತಿರುಚಿ ರಾಜಕೀಯ ಮಾಡುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ತರಬೇತಿ ಪಡೆದುಕೊಳ್ಳಲು ಅನೇಕ ಅಸ್ಸಾಮಿಗರು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಅವರೇ(ಬಿಸ್ವಾ) ಟ್ವೀಟ್ ಮಾಡಿದ್ದರು. ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಭಾನುವಾರದಂದು, “ಗುಜರಾತ್ ಮತ್ತು ಅಸ್ಸಾಂನಲ್ಲಿ ಏನಿದೆ? ಅಲ್ಲಿ ಪ್ರತಿಭೆ ಇದೆಯೇ?” ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಿದ್ದರು. ಸೆಮಿಕಂಡಕ್ಟರ್ ಉದ್ಯಮಗಳನ್ನು ಬೆಂಗಳೂರಿನ ಬದಲು ಈ ರಾಜ್ಯಗಳಲ್ಲಿ ಸ್ಥಾಪಿಸುವ ಸರ್ಕಾರದ ನಿರ್ಧಾರವನ್ನು ಅವರು ಪ್ರಶ್ನಿಸಿದ್ದರು. ಅವರ ಈ ಹೇಳಿಕೆಗಳು ರಾಜಕೀಯ ವಿರೋಧಿಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಇತರ ರಾಜ್ಯಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

Tags: Priyankಪ್ರಿಯಾಂಕ್ ಖರ್ಗೆ
Previous Post

ಯೂಟ್ಯೂಬರ್ ಸಮೀರ್‌ಗೆ ಶಾಕ್ ಕೊಟ್ಟ ಕೋರ್ಟ್

Next Post

ಪ್ರಕಾಶ್​ ರಾಜ್, ಪೌರ ಕಾರ್ಮಿಕೆ ಫಕ್ಕೀರಿ​ ಸೇರಿ 70 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವ

Next Post
kannada rajotsava aword

ಪ್ರಕಾಶ್​ ರಾಜ್, ಪೌರ ಕಾರ್ಮಿಕೆ ಫಕ್ಕೀರಿ​ ಸೇರಿ 70 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.