Updated By: Priyalachhi

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.

ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಪರಮೇಶ್ವರ್ ಅವರು, ಕಾರಾಗೃಹದ ಮುಖ್ಯ ಅಧೀಕ್ಷಕ ಸುರೇಶ್‌, ಜೈಲು ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್‌ ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದಾರೆ.

ಅಲ್ಲದೆ, ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಇರಲಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version