• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಬೆಂಗಳೂರಿನಲ್ಲಿ ಆರ್​ಟಿಒ ಭರ್ಜರಿ ಕಾರ್ಯಾಚರಣೆ

Sambrama Prabha News by Sambrama Prabha News
November 7, 2025
in Home
0
ಬೆಂಗಳೂರಿನಲ್ಲಿ ಆರ್​ಟಿಒ ಭರ್ಜರಿ ಕಾರ್ಯಾಚರಣೆ

Updated By: Priyalachhi

ಬೆಂಗಳೂರು, ನವೆಂಬರ್ 7: ಅಕ್ಟೋಬರ್ 24 ರಂದು ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಯ ಎಸಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದರು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಸಾರಿಗೆ ಸಚಿವರು, ಸುರಕ್ಷತಾ ಕ್ರಮಗಳನ್ನು ಪಾಲಿಸದ ಎಲ್ಲಾ ಖಾಸಗಿ ಬಸ್ಸುಗಳನ್ನು (Private Buses) ತಪಾಸಣೆ ನಡೆಸಿ ವರದಿ ನೀಡುವಂತೆ ಸಾರಿಗೆ ಇಲಾಖೆಯ (Transport Department) ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅಪರ ಸಾರಿಗೆ ಆಯುಕ್ತ (ಪ್ರವರ್ತನ ದಕ್ಷಿಣ) ನೇತೃತ್ವದಲ್ಲಿ ಒಟ್ಟು 12 ತಂಡಗಳನ್ನು ರಚಿಸಿ ಬಸ್​​ಗಳ ತಪಾಸಣೆ ಕಾರ್ಯಚರಣೆ ನಡೆಸಲಾಗಿದೆ. ಪ್ರಯಾಣಿಕರ ಸುರಕ್ಷತಾ ಅಂಶಗಳಾದ ತುರ್ತು ನಿರ್ಗಮನ ವ್ಯವಸ್ಥೆ, ಬೆಂಕಿ ನಂದಿಸುವ ಸಾಧನ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಪ್ರಯಾಣಿಕರ ವಾಹನಗಳಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಸರಕುಗಳನ್ನು ಗುರಿಯಾಗಿಸಿ ತಪಾಸಣೆ ನಡೆಸಲಾಗಿದೆ.

ಅಕ್ಟೋಬರ್ 24 ರಿಂದ ನವೆಂಬರ್ 5 ರ ವರೆಗೆ, ಅಂದರೆ 13 ದಿನಗಳಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿ 13 ಆರ್​ಟಿಒಗಳಿಂದಲೂ ಕಾರ್ಯಾಚರಣೆ ನಡೆಯುತ್ತಿದೆ.

4,452 ಖಾಸಗಿ ಬಸ್ಸುಗಳನ್ನು ತಪಾಸಣೆ ಮಾಡಿ, 604 ಬಸ್ಸುಗಳ ಮೇಲೆ ಕೇಸ್ ದಾಖಲಿಸಲಾಗಿದೆ. 102 ಬಸ್ಸುಗಳನ್ನು ಸೀಜ್ ಮಾಡಲಾಗಿದೆ. ಈ ಬಸ್ಸುಗಳಿಂದ ಟ್ಯಾಕ್ಸ್ ಮತ್ತು ದಂಡದ ರೂಪದಲ್ಲಿ 1,09,91,284 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಒಟ್ಟಿನಲ್ಲಿ ಕರ್ನೂಲು ಘಟನೆಯಿಂದ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಪಾಲಿಸದ ಬಸ್​​​ಗಳ ಮಾಲೀಕರಿಗೆ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ. ಇನ್ನಾದರೂ ಖಾಸಗಿ ಬಸ್ ಮಾಲೀಕರು ಎಚ್ಚೆತ್ತುಕೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Tags: BengaluruPrivate BusesRTOTransport Department
Previous Post

ಕಬ್ಬಿನ ಗಾಣಕ್ಕೆ ಸಿಲುಕಿದ ಸರ್ಕಾರ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

Next Post

ಅನ್ನಭಾಗ್ಯದಡಿ ನೀಡುವ ಇಂದಿರಾ ಆಹಾರ ಕಿಟ್​​ನಲ್ಲಿ ಹೆಸರುಕಾಳು ಬದಲು ಹೆಚ್ಚುವರಿ ತೊಗರಿಬೇಳೆ ವಿತರಿಸಲು ತೀರ್ಮಾನ

Next Post
ಅನ್ನಭಾಗ್ಯದಡಿ ನೀಡುವ ಇಂದಿರಾ ಆಹಾರ ಕಿಟ್​​ನಲ್ಲಿ ಹೆಸರುಕಾಳು ಬದಲು ಹೆಚ್ಚುವರಿ ತೊಗರಿಬೇಳೆ ವಿತರಿಸಲು ತೀರ್ಮಾನ

ಅನ್ನಭಾಗ್ಯದಡಿ ನೀಡುವ ಇಂದಿರಾ ಆಹಾರ ಕಿಟ್​​ನಲ್ಲಿ ಹೆಸರುಕಾಳು ಬದಲು ಹೆಚ್ಚುವರಿ ತೊಗರಿಬೇಳೆ ವಿತರಿಸಲು ತೀರ್ಮಾನ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.