Updated By: Priyalachhi

ಬೆಂಗಳೂರು, ನವೆಂಬರ್ 7: ಅಕ್ಟೋಬರ್ 24 ರಂದು ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಯ ಎಸಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದರು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಸಾರಿಗೆ ಸಚಿವರು, ಸುರಕ್ಷತಾ ಕ್ರಮಗಳನ್ನು ಪಾಲಿಸದ ಎಲ್ಲಾ ಖಾಸಗಿ ಬಸ್ಸುಗಳನ್ನು (Private Busesತಪಾಸಣೆ ನಡೆಸಿ ವರದಿ ನೀಡುವಂತೆ ಸಾರಿಗೆ ಇಲಾಖೆಯ (Transport Department) ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅಪರ ಸಾರಿಗೆ ಆಯುಕ್ತ (ಪ್ರವರ್ತನ ದಕ್ಷಿಣ) ನೇತೃತ್ವದಲ್ಲಿ ಒಟ್ಟು 12 ತಂಡಗಳನ್ನು ರಚಿಸಿ ಬಸ್​​ಗಳ ತಪಾಸಣೆ ಕಾರ್ಯಚರಣೆ ನಡೆಸಲಾಗಿದೆ. ಪ್ರಯಾಣಿಕರ ಸುರಕ್ಷತಾ ಅಂಶಗಳಾದ ತುರ್ತು ನಿರ್ಗಮನ ವ್ಯವಸ್ಥೆ, ಬೆಂಕಿ ನಂದಿಸುವ ಸಾಧನ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಪ್ರಯಾಣಿಕರ ವಾಹನಗಳಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಸರಕುಗಳನ್ನು ಗುರಿಯಾಗಿಸಿ ತಪಾಸಣೆ ನಡೆಸಲಾಗಿದೆ.

ಅಕ್ಟೋಬರ್ 24 ರಿಂದ ನವೆಂಬರ್ 5 ರ ವರೆಗೆ, ಅಂದರೆ 13 ದಿನಗಳಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿ 13 ಆರ್​ಟಿಒಗಳಿಂದಲೂ ಕಾರ್ಯಾಚರಣೆ ನಡೆಯುತ್ತಿದೆ.

4,452 ಖಾಸಗಿ ಬಸ್ಸುಗಳನ್ನು ತಪಾಸಣೆ ಮಾಡಿ, 604 ಬಸ್ಸುಗಳ ಮೇಲೆ ಕೇಸ್ ದಾಖಲಿಸಲಾಗಿದೆ. 102 ಬಸ್ಸುಗಳನ್ನು ಸೀಜ್ ಮಾಡಲಾಗಿದೆ. ಈ ಬಸ್ಸುಗಳಿಂದ ಟ್ಯಾಕ್ಸ್ ಮತ್ತು ದಂಡದ ರೂಪದಲ್ಲಿ 1,09,91,284 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಒಟ್ಟಿನಲ್ಲಿ ಕರ್ನೂಲು ಘಟನೆಯಿಂದ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಪಾಲಿಸದ ಬಸ್​​​ಗಳ ಮಾಲೀಕರಿಗೆ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ. ಇನ್ನಾದರೂ ಖಾಸಗಿ ಬಸ್ ಮಾಲೀಕರು ಎಚ್ಚೆತ್ತುಕೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version