• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

SC, ST ರೈತ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಸಚಿವ ಭೋಸರಾಜು

Sambrama Prabha News by Sambrama Prabha News
January 1, 2026
in Politics
0
SC, ST ರೈತ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಸಚಿವ ಭೋಸರಾಜು

Updated By: Priyalachhi 

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್‌ಸಿಪಿ (SCP) ಮತ್ತು ಟಿಎಸ್‌ಪಿ (TSP) ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

6,322 ರೈತ ಕುಟುಂಬಗಳಿಗೆ ಕೊಳವೆಬಾವಿ ಸೌಲಭ್ಯ: “2025–26ನೇ ಆರ್ಥಿಕ ಸಾಲಿನಲ್ಲಿ ಎಸ್‌ಸಿಪಿ–ಟಿ‌ಎಸ್‌ಪಿ ಅಡಿಯಲ್ಲಿ 3,939 ಪರಿಶಿಷ್ಟ ಜಾತಿ ಮತ್ತು 2,383 ಪರಿಶಿಷ್ಟ ಪಂಗಡದ ಕುಟುಂಬಗಳು ಸೇರಿದಂತೆ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಮುಗಿಸಿ, ನಿಗದಿತ ಸಮಯದಲ್ಲಿ ರೈತರಿಗೆ ಸೌಲಭ್ಯ ತಲುಪಿಸಬೇಕು” ಎಂದು ನಿರ್ದೇಶನ ನೀಡಿದರು.

ಜಲ ಸಂರಕ್ಷಣೆಗೆ ವಿಶೇಷ ಒತ್ತು: ಅಂತರ್ಜಲ ಮಟ್ಟವನ್ನು ವೃದ್ಧಿಸುವ ದೃಷ್ಟಿಯಿಂದಲೂ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಪರಿಶಿಷ್ಟ ಸಮುದಾಯಗಳ ಕೃಷಿ ಪ್ರದೇಶಗಳಲ್ಲಿ ಚೆಕ್ ಡ್ಯಾಮ್‌ಗಳ ನಿರ್ಮಾಣ ಮತ್ತು ಸಾಮೂಹಿಕ ಏತ ನೀರಾವರಿ ಯೋಜನೆಗಳಂತಹ ‘ಜಲ ಸಂರಕ್ಷಣಾ ರಚನೆ’ಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಕಳೆದ ವರ್ಷ 5,371 ರೈತ ಕುಟುಂಬಗಳಿಗೆ ಕೊಳವೆಬಾವಿ: 2024–25ನೇ ಸಾಲಿನಲ್ಲಿ 365 ಕೋಟಿ ವೆಚ್ಚದಲ್ಲಿ ಒಟ್ಟು 5,371 ರೈತ ಕುಟುಂಬಗಳಿಗೆ (3,388 ಎಸ್‌ಸಿ ಮತ್ತು 1,983 ಎಸ್‌ಟಿ) ಯಶಸ್ವಿಯಾಗಿ ವಿದ್ಯುತ್ ಸಂಪರ್ಕಿತ ಕೊಳವೆಬಾವಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳಿಗೆ ಗಂಗಾ ಕಲ್ಯಾಣ ಯೋಜನೆ: ಈ ಯೋಜನೆಯಡಿ ಸಣ್ಣ ಹಾಗೂ ಅತಿ ಸಣ್ಣ ರೈತರು ಉಚಿತವಾಗಿ ಸರ್ಕಾರಿಂದ ಕೊಳವೆ ಬಾವಿ ಪಡೆಯಬಹುದಾಗಿದೆ. ಈ ಮೂಲಕ ಕೃಷಿಗೆ ಉತ್ತೇಜನ ನೀಡುವುದು ಸರ್ಕಾರದ ಉದ್ದೇಶ. ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಬಿಡುಗಡೆಯಾದ ಅನುದಾನದ ಆಧಾರದ ಮೇಲೆ ಗಂಗಾ ಕಲ್ಯಾಣ ಯೋಜನೆಗೆ ಹಣ ಬಿಡುಗಡೆ ಆಗಲಿದೆ.

Tags: ಸಚಿವ ಭೋಸರಾಜು
Previous Post

ಮದ್ಯ ಅಲ್ಲ, ಹಾಲು ಕುಡಿದು ಹೊಸ ವರ್ಷಾಚರಣೆ

Next Post

ದೇಶಾದ್ಯಂತ ಹೊಸ ವರ್ಷದ ಸಂಭ್ರಮ: ಕುಣಿದು ಕುಪ್ಪಳಿಸಿದ ಜನ

Next Post
ದೇಶಾದ್ಯಂತ ಹೊಸ ವರ್ಷದ ಸಂಭ್ರಮ: ಕುಣಿದು ಕುಪ್ಪಳಿಸಿದ ಜನ

ದೇಶಾದ್ಯಂತ ಹೊಸ ವರ್ಷದ ಸಂಭ್ರಮ: ಕುಣಿದು ಕುಪ್ಪಳಿಸಿದ ಜನ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.