BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

, ,

ವಿಜಯೇಂದ್ರ ವಿರುದ್ದ ಸಿದ್ದರಾಮಯ್ಯ ಗರಂ

Author Picture
Published On: November 6, 2025

—Advertisement—

Updated By: Priyalachhi

ಬೆಂಗಳೂರು: ಕಬ್ಬಿನ ಬಾಕಿ ಪಾವತಿ (Payment of cane dues) ಮತ್ತು ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಕ್ಕೋಡಿಯ (Chikkodi) ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಪಕ್ಷಗಳು ಸಹ ಸರ್ಕಾರದ ವಿರುದ್ಧ ಕುರಿತು ಸಮರ ಸಾರಿವೆ; ಇದ್ರ ನಡುವೆ, ನಿನ್ನೆ ಸಚಿವ ಹೆಚ್​​ ಕೆ ಪಾಟಿಲ್ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದ್ದು, ಇದ್ರ ನಡುವೆ ವಿಜಯೇಂದ್ರ (Vijayendra) ಮೇಲೆ ಸಿಎಂ ಗರಂ ಆಗಿದ್ದಾರೆ ಎನ್ನಲಾಗಿದೆ.

ಸಿಎಂಗೆ ಪರಮಾಧಿಕಾರ ನೀಡಿದ ಕ್ಯಾಬಿನೆಟ್

ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡುವ ಅಥವಾ ಇನ್ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಪರಮಾಧಿಕಾರವನ್ನ ಇಂದು ನಡೆಸ ಸಚಿವ ಸಂಪುಟ ಸಭೆಯು ಸಹಕಾರಿ ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದೆ. ಹಾಗಾಗಿ, ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಗಳು ಸುದ್ದಿಗೋಷ್ಟಿ ನಡೆಸಿ, ಬೆಲೆ ನಿಗಧಿ ಬಗ್ಗೆ ಘೋಷಣೆ ಸಾಧ್ಯತೆಯಿದೆ.

ಚಿಕ್ಕೋಡಿಗೆ ಸಕ್ಕರೆ ಸಚಿವ

ಚಿಕ್ಕೋಡಿಯ ಗುರ್ಲಾಪುರ ಕ್ರಾಸ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರೊಂದಿಗಿನ ಸಚಿವ ಹೆಚ್.ಕೆ. ಪಾಟೀಲ ಅವರ ಸಭೆಯು ವಿಫಲವಾದ ಹಿನ್ನೇಲೆಯಲ್ಲಿ ಇಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್​ ಅವರೇ ರೈತರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಮೀಟಿಂಗ್

ಇಂದು ಮುಖ್ಯಮಂತ್ರಿಗಳು ಕಬ್ಬಿಗೆ ಬೆಲೆ ಘೋಷಣೆ ಮಾಡಿದ ನಂತರ, ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ತಿರ್ಮಾನ ಮಾಡಲಿದ್ದಾರೆ ಎಂದು ವರದಿಯಾಗಿದೆ.

ತೀವ್ರಗೊಂಡಿದೆ ರೈತರ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಚಿಕ್ಕೋಡಿ ಸೇರಿದಂತೆ ಹಲವು ಭಾಗಗಳಲ್ಲಿ  ಪ್ರತಿಭಟನೆ ತೀವ್ರಗೊಂಡಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್‌. ಕೆ ಪಾಟೀಲ್‌ ಅವರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿತ್ತು.

ಕಬ್ಬು ಬೆಳೆಗಾರರ ಬೇಡಿಕೆಗಳೇನು?

ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ. ಕಬ್ಬಿನ ತೆರಿಗೆ ಹಣದಲ್ಲಿ ರೈತರಿಗೆ 1 ಸಾವಿರ ರೂ. ನೀಡಬೇಕು. ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವುದು ನಿಲ್ಲಬೇಕು. ಸರ್ಕಾರವೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಮೆಷಿನ್ ಇಡಬೇಕು. ತೂಕ ಸೇರಿ ಪ್ರತಿಯೊಂದು ಮಾಹಿತಿ ಡಿಜಿಟಲೀಕರಣ ಮಾಡಬೇಕು. ಸಕ್ಕರೆ ಆಯುಕ್ತರ ಕಚೇರಿಗೆ 100 ಸಿಬ್ಬಂದಿ ನೇಮಕ‌ ಮಾಡಬೇಕು ಎಂಬ ಬೇಡಿಕೆಗಳನ್ನು ರೈತರು ಮುಂದಿಟ್ಟಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp