BREAKING NEWS
ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •   ಭಾರಿ ಮಳೆಗೆ ಭೀಕರ ಭೂಕುಸಿತ: ಮಣ್ಣಿನಡಿ ಸಿಲುಕಿದ ಹಲವು ವಾಹನಗಳು   •   ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •  

—Advertisement—

,

ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ

Author Picture
Published On: May 27, 2026

—Advertisement—

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಕೇಳಿದ ಕೂಡಲೇ ಚಲುವರಾಯ ನಾಯಕ ಎಂಬ ಅಭಿಮಾನಿಯೊಬ್ಬರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

“ಸಿದ್ದರಾಮಯ್ಯ ಸಾಹೇಬರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನಮ್ಮ ಆಗ್ರಹ. ಅವರಿಗೆ ಐದು ವರ್ಷಗಳ ಪೂರ್ಣಾವಧಿ ನೀಡಬೇಕು. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿಯವರು ಈ ವಿಚಾರದಲ್ಲಿ ತೆಗೆದುಕೊಂಡಿರುವ ನಿರ್ಧಾರ ನೂರಕ್ಕೆ ನೂರು ತಪ್ಪು,” ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ‘ಅನ್ನರಾಮಯ್ಯ’, ‘ದಲಿತ ರಾಮಯ್ಯ’, ‘ಅಹಿಂದ ನಾಯಕ’ ಹಾಗೂ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ ಅಭಿಮಾನಿಗಳು, “ಅವರ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ಬಡವರ ಪಾಲಿನ ಧೀಮಂತ ನಾಯಕರಾಗಿರುವ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿಯೇ ರಾಜಕೀಯದಿಂದ ನಿರ್ಗಮಿಸಬೇಕು,” ಎಂದು ಒತ್ತಾಯಿಸಿದ್ದಾರೆ.

ವರುಣಾ ಕ್ಷೇತ್ರದ ಅಭಿಮಾನಿಗಳಾದ ಅಭಿಷೇಕ್ ಮತ್ತು ಮಹದೇವ್ ಅವರು ಮಾತನಾಡಿ, “ರಾಹುಲ್ ಗಾಂಧಿಯವರಿಗೆ ಕೈ ಮುಗಿದು ಕೇಳಿಕೊಳ್ಳುತ್ತೇವೆ, ಇದು ಸಂಪೂರ್ಣ ತಪ್ಪು ನಿರ್ಧಾರ. ಇದೇ ರೀತಿ ಬೇರೆಯವರಿಗೆ ಸರ್ಕಾರವನ್ನು ಬಿಟ್ಟುಕೊಟ್ಟರೆ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಮತ್ತು ಈಗಿರುವ ಸರ್ಕಾರ ಆರು ತಿಂಗಳೂ ಉಳಿಯುವುದಿಲ್ಲ,” ಎಂದು ಎಚ್ಚರಿಕೆ ನೀಡಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp