• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Sambrama Prabha News by Sambrama Prabha News
November 4, 2025
in Exclusive, Home, Latest News
0
ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Updated By: Priyalachhi

ಬೆಂಗಳೂರು, (ನವೆಂಬರ್ 04): ಧರ್ಮಸ್ಥಳದಲ್ಲಿ (dharmasthala mass burial Case) ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯ ಜೈಲು ಪಾಲಾಗಿದ್ದು, ಈ ಪ್ರಕರಣ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎನ್ನುವಾಗಲೇ ಮಹಿಳಾ ಆಯೋಗ ಮಧ್ಯೆ ಪ್ರವೇಶ ಮಾಡಿದೆ. ಹೌದು..ಧರ್ಮಸ್ಥಳ ಪ್ರಕರಣದ  ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿ ರಾಜ್ಯ ಮಹಿಳಾ ಆಯೋಗವು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.

ಆಯೋಗದ ಪತ್ರದಲ್ಲೇನಿದೆ?

ಧರ್ಮಸ್ಥಳದಲ್ಲಿ ಕಳೆದ 20ಕ್ಕೂ, ಹೆಚ್ಚು ವರ್ಷಗಳಿಂದ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಈ ಹಿಂದೆ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿತ್ತು. ಅದಾದ ಬಳಿಕ ಎಸ್‌ಐಟಿ ರಚನೆಯಾಗಿದೆ. ಎಸ್‌ಐಟಿ ರಚನೆಯಾಗಬೇಕೆಂಬ ಕೋರಿಕೆಯ ಆಶಯವೂ ಮತ್ತು ಸರ್ಕಾರದ ಆದೇಶವೂ ಕೇವಲ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211 (ಎ), ಬಿಎನ್‌ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ’ ತನಿಖೆಯನ್ನು ಎಸ್‌ಐಟಿ ಮಾಡಬೇಕೆಂಬುದನ್ನು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್‌ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ.

ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‌ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಪನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಪನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡಿ ಎಂದು ಮನವಿ ಮಾಡಿದ್ದಾರೆ.

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಹಿಳಾ ಸಂಘಟನೆಗಳು, ಹೋರಾಟಗಾರರು ಒಟ್ಟುಗೂಡಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದರು.

Tags: dharmasthala mass burial Case
Previous Post

ಕೋಟ್ಯಂತರ ರೂ ವೆಚ್ಚದಲ್ಲಿ ‘ಹಿಂದೂ ದೇವಾಲಯ’ ಕಟ್ಟಿಸಿಕೊಟ್ಟ ಮುಸ್ಲಿಂ ಉದ್ಯಮಿ!

Next Post

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ

Next Post
ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.