BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

SSLC ಫಲಿತಂಶ ಬಂದಿದೆ ಟ್ವೀಟ್ ಮಾಡಿ; ಎಲ್ಲಿದ್ದೀರಿ ಮಹಾಜ್ಞಾನಿ ಪ್ರಿಯಾಂಕ್‌ ಖರ್ಗೆ ಅವರೇ?

Author Picture
Published On: April 23, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ ಕಲಬುರಗಿ ಕೊನೆಯ ಸ್ಥಾನ ಪಡೆದಿದೆ.

ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬಂದಿರುವುದಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ.

ಸ್ವಂತ ಜಿಲ್ಲೆಯ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಖರ್ಗೆ ಕುಟುಂಬ ವಿಫಲವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ವಾಗ್ದಾಳಿ ನಡೆಸಿವೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, “S.S.L.C ಫಲಿತಾಂಶ ಬಂದಿದೆ ಟ್ವೀಟ್ ಮಾಡಿ, ಎಲ್ಲಿದ್ದೀರಿ ಮಹಾಜ್ಞಾನಿ ಪ್ರಿಯಾಂಕ್‌ ಖರ್ಗೆ ಅವರೇ?” ಎಂದು ಪ್ರಶ್ನಿಸಿದೆ.

​​SSLC ಫಲಿತಾಂಶದಲ್ಲಿ ಕಲಬುರಗಿ 35 ಅಂದರೆ ಕೊನೆಯ ಸ್ಥಾನ ಪಡೆದಿದ್ದು, ಹಿಂದಿನ ಸಾಲಿನಲ್ಲಿಯೂ 34ನೇ ಸ್ಥಾನದಲ್ಲಿತ್ತು. 4-5 ದಶಕಗಳಿಂದ ಕಲಬುರಗಿ ಜಿಲ್ಲೆ ಆಳುತ್ತಿರುವ ಖರ್ಗೆ ಕುಟುಂಬ ಸ್ವಂತ ಜಿಲ್ಲೆಯ ಮಕ್ಕಳ ಭವಿಷ್ಯ ರೂಪಿಸುವಲ್ಲಿ ವಿಫಲವಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಜೆಡಿಎಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಕಲಬುರಗಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ, ಶಿಕ್ಷಕರ ನೇಮಕ ಸೇರಿದಂತೆ ಶಿಕ್ಷಣದ ಪ್ರಗತಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದೀರಿ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ JDS ಆಕ್ರೋಶ ವ್ಯಕ್ತಪಡಿಸಿದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಅವರೇ, ನಿಮ್ಮ ಭಾಷಣದ ‘ಸಾಧನೆ’ಗೆ ಈ ಫಲಿತಾಂಶವನ್ನು ಸೇರಿಸಿಕೊಳ್ಳಿ. ಕಲಬುರಗಿಯನ್ನು ಅಕ್ಷರಶಃ ಶೈಕ್ಷಣಿಕ ಅಂಧಕಾರಕ್ಕೆ ದೂಡಿದ್ದೀರಿ. ಮಾತಿನಲ್ಲಿ ತೋರಿಸುವ ಶೌರ್ಯ ಶಿಕ್ಷಣದ ಸುಧಾರಣೆಯಲ್ಲಿ ತೋರಿಸಿ ಎಂದಿರುವ ಜೆಡಿಎಸ್​​ ಪ್ರಿಯಾಂಕ್ ಖರ್ಗೆಯನ್ನು ನಾಟಿಕೋಳಿ ಮಿನಿಸ್ಟರ್‌ ಎಂದು ವ್ಯಂಗ್ಯವಾಡಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp