Updated By: Priyalachhi

ಬೆಂಗಳೂರು: ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಸಿದ್ದವಿದ್ದು, ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ನನಗೆ ಕೊನೆಯ ಉಸಿರು ಇರುವವರೆಗೂ, ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಹೇಳಿದರು.

ಅಹಿಂದ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು? ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ – ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version