BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

,

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ

Author Picture
Published On: November 7, 2025

—Advertisement—

Updated By: Priyalachhi

ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ.

ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಗೆ ಆಗ್ರಹಿಸಿ ರೈತರು ರಾಷ್ಟ್ರೀಯ‌ ಹೆದ್ದಾರಿ ತಡೆದು ಪ್ರತಿಭಟಿಸುವಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಈ ವೇಳೆ ರೈತರನ್ನು ಹೊರತು ಪಡಿಸಿ ಕೆಲ ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ವಾಗ್ವಾದ, ನೂಕಾಟ, ತಳ್ಳಾಟ ಶುರುವಾಗಿದ್ದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ, ಹಲವು ಪೊಲೀಸರಿಗೆ ಕಲ್ಲು ತಾಗಿ ಗಾಯವಾಗಿದೆ. ಸಾರಿಗೆ ಬಸ್, ಲಾರಿ ಸೇರಿ ಐದಕ್ಕೂ ಅಧಿಕ ವಾಹನಗಳಿಗೆ ಕಲ್ಲು ತೂರಿದ ಪರಿಣಾಮ ಆ ವಾಹನಗಳ ಗಾಜು ಪುಡಿ ಪುಡಿ ಆಗಿವೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಭೇಟಿ ನೀಡಿದ್ದು, ರೈತ ಮುಖಂಡರೊಂದಿಗೆ ಮಾತನಾಡಿ ಅವರನ್ನು ಮನವಲಿಸಲು ಪ್ರಯತ್ನಿಸುತ್ತಿದ್ದಾರೆ. ಈ ವೇಳೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಚೂನಪ್ಪ ಪೂಜಾರಿ ಸೇರಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದು ಕಿಡಿಗೇಡಿಗಳ ಕೆಲಸ ಎಂದ ಶಶಿಕಾಂತ ಗುರೂಜಿಕಲ್ಲು ತೂರಾಟ ನಮ್ಮ ರೈತರು ಮಾಡಿಲ್ಲ, ಯಾರೋ ಕಿಡಿಗೇಡಿಗಳು ಮಾಡಿರಬಹುದು. ಕಲ್ಲು ತೂರಾಟ ಮಾಡಿದವರನ್ನು ಬಂಧನ ಮಾಡುವಂತೆ ರೈತ ಮುಖಂಡ ಶಶಿಕಾಂತ ಗುರೂಜಿ ಬೆಳಗಾವಿ ಪೊಲೀಸರಿಗೆ ಮನವಿ ಮಾಡಿಕೊಂಡರು.

ಗುರ್ಲಾಪುರ ಗ್ರಾಮದ ಕಬ್ಬು ಬೆಳೆಗಾರರ ಹೋರಾಟ ವೇದಿಕೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹುಕ್ಕೇರಿ ತಾಲೂಕಿನ ಹತ್ತರಕಿ ಟೋಲ್ ಗೇಟ್ ಬಳಿ ನಮ್ಮ ರೈತರು ಶಾಂತ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದರೆ, ಯಾರೋ ಕಿಡಿಗೇಡಿಗಳು ಪೊಲೀಸರ​ ವಾಹನಕ್ಕೆ ಕಲ್ಲು ತೂರಿದ್ದಾರೆಂದು ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ನಮ್ಮ ರೈತರು ಅಲ್ಲಿಯೇ ಇದ್ದು, ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದ್ದೇನೆ. ನಾವು ಕಳೆದ ಒಂಬತ್ತು ದಿನಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಲಕ್ಷಾಂತರ ಜನ ರೈತರು ಸೇರಿದ್ದಾರೆ. ಇದುವರೆಗೂ ಯಾವುದೇ ಅಹಿತಕರ ಘಟನೆ ಆಗಿಲ್ಲ. ಹಾಗೂ ಸರ್ಕಾರದ ಆಸ್ತಿ ಪಾಸ್ತಿಗೆ ನಾವು ಹಾನಿ ಮಾಡಿಲ್ಲ. ಇದು ಕಿಡಿಗೇಡಿಗಳ ಕೆಲಸ. ಹಾಗಾಗಿ ಪೊಲೀಸರು ಅಂತವರನ್ನು ತಕ್ಷಣವೇ ಬಂಧನ ಮಾಡಬೇಕೆಂದು ಶಶಿಕಾಂತ ಗುರೂಜಿ ಆಗ್ರಹಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp