Updated By: Priyalachhi
ಬೆಂಗಳೂರು: ಕಬ್ಬು ಬೆಳೆಗಾರರ ಹೆಸರಿನಲ್ಲಿ ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಹಚ್ಚಿರುವ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು. ಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ನಡುವೆ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದ್ದು, ಜವಾಬ್ದಾರಿಯುತ ಸರ್ಕಾರ ವಿಷಯದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳದೇ ಅತ್ತಿತ್ತ ಬೊಟ್ಟು ಮಾಡುತ್ತಾ, ಸಬೂಬು ಹೇಳುತ್ತಾ, ಸುಮ್ಮನೆ ಕುಳಿತಿರುವುದು ರೈತರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿದೆ. ಈ ಎಲ್ಲಾ ಬೆಳವಣಿಗೆಗೂ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅನ್ನದಾತರ ನೋವು ಮತ್ತು ಆಗ್ರಹದ ಕಿಚ್ಚು, ವಿಕೋಪಕ್ಕೆ ತಿರುಗಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ಬಡಿದೆಬ್ಬಿಸುವ ಜ್ವಾಲೆಯಂತಾಗಿದೆ. ತಮ್ಮ ಬದುಕಿನ ಆಧಾರವಾಗಿದ್ದ, ಕಬ್ಬು ತುಂಬಿದ 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಗೇ ಬೆಂಕಿ ಹಚ್ಚುವ ಮಟ್ಟಿಗೆ ಆಕ್ರೋಶಕ್ಕೆ ಒಳಗಾಗಿರುವುದು ನಮ್ಮ ಕಬ್ಬು ಬೆಳೆಗಾರರ ಆಗ್ರಹದ ಜ್ವಾಲಾಗ್ನಿಗೆ ಸಾಕ್ಷಿಯಾಗಿದೆ. ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನಿಗೆ ಈ ಬೆಳವಣಿಗೆ ದುಃಖ ಮತ್ತು ಆತಂಕ ಉಂಟು ಮಾಡಿದೆ ಎಂದು ಹೇಳಿದ್ದಾರೆ.

 

 

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version