• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮತ್ತೆ ಪ್ರತಿಧ್ವನಿಸಿದ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು

Sambrama Prabha News by Sambrama Prabha News
November 11, 2025
in Latest News, Politics
0
ಮತ್ತೆ ಪ್ರತಿಧ್ವನಿಸಿದ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು

Updated By: Priyalachhi

ಬೆಳಗಾವಿ: ಮಾಜಿ ಸಚಿವ ದಿ.ಉಮೇಶ ಕತ್ತಿ ಬಳಿಕ ಮತ್ತೊಬ್ಬ ಬೆಳಗಾವಿ ಜಿಲ್ಲೆಯ ಶಾಸಕರಿಂದ ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ಕೇಳಿ ಬಂದಿದೆ. ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರಾದೇಶಿಕ ಅಸಮಾನತೆ ವಿರುದ್ಧ ಹಿರಿಯ ರಾಜಕಾರಣಿ, ಕಾಗವಾಡ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ದಕ್ಷಿಣ ಕರ್ನಾಟಕ ಹೋಲಿಸಿದರೆ ಉತ್ತರ ಕರ್ನಾಟಕ ಹಿಂದುಳಿದಿದೆ. ದಕ್ಷಿಣಕ್ಕೆ ತೋರಿಸುವ ವಿಶೇಷ ಕಾಳಜಿ ಉತ್ತರಕ್ಕೆ ಯಾಕಿಲ್ಲ?. ಎಲ್ಲರೂ ಕನ್ನಡನಾಡಿನ ಮಕ್ಕಳೇ, ಆದರೂ ಯಾಕೆ ಮಲತಾಯಿ ಧೋರಣೆ?. ತಾರತಮ್ಯ ಹೋಗಲಾಡಿಸಿ, ಇಲ್ಲವೇ ಪ್ರತ್ಯೇಕ ಉತ್ತರ ಕರ್ನಾಟಕ ರಚನೆ ಮಾಡುವಂತೆ ಈ ಭಾಗದ ಕೆಲ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.

ದಿ.ಉಮೇಶ ಕತ್ತಿ ಅವರು ಕೂಡ ಈ ವಿಚಾರದಲ್ಲಿ ಧ್ವನಿ ಎತ್ತಿದ್ದರು. ಅಲ್ಲದೇ ಉತ್ತರ ಕರ್ನಾಟಕ ವಿಕಾಸ ವೇದಿಕೆಯಡಿ ಈಗಲೂ ಹೋರಾಟ ಮುಂದುವರಿದಿದೆ. ಈ ನಡುವೆ ಶಾಸಕ ರಾಜು ಕಾಗೆ ಕೂಡ ಪ್ರತ್ಯೇಕ ಉತ್ತರ ಕರ್ನಾಟಕ ಆಗಲೇಬೇಕು ಅಂತಾ ಒತ್ತಾಯಿಸಿದ್ದಾರೆ. ಆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನೂ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
Tags: North Karnatakaಉತ್ತರ ಕರ್ನಾಟಕದ
Previous Post

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ: ಸಿದ್ದರಾಮಯ್ಯ

Next Post

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

Next Post
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.