Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸೇನೆಯನ್ನು ಎಳೆದು ತರುತ್ತಿರುವುದು ರಾಜಕೀಯ ಕುತಂತ್ರ
Nation News Politics

ಸೇನೆಯನ್ನು ಎಳೆದು ತರುತ್ತಿರುವುದು ರಾಜಕೀಯ ಕುತಂತ್ರ

Sambrama Prabha NewsBy Sambrama Prabha NewsNovember 8, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ನವದೆಹಲಿ: ಭಾರತೀಯ ಸೇನೆಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸೇನೆಯನ್ನು ರಾಜಕೀಯಕ್ಕೆ ಎಳೆಯಬೇಡಿ ಎಂದು ಎಚ್ಚರಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ʻಶೇ. 10 ಇರುವ ಜನರು ಸೇನೆಯನ್ನ ನಿಯಂತ್ರಿಸುತ್ತಿದ್ದಾರೆʼ ಎಂಬ ರಾಹುಲ್‌ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದರು. ಇದು ರಾಹುಲ್‌ ಗಾಂಧಿ ಅವರ ಬೇಜವಾಬ್ದಾರಿ ತನದ ಹೇಳಿಕೆ. ಜಾತಿ ರಾಜಕೀಯಕ್ಕೆ ಸೇನೆಯನ್ನು ಎಳೆದು ತರುತ್ತಿರುವುದು ವಿಭಜಿಸುವ ರಾಜಕೀಯ ಕುತಂತ್ರ ಎಂದು ವಾಗ್ದಾಳಿ ನಡೆಸಿದರು.

ರಾಹುಲ್‌ ಗಾಂಧಿ ಅಭಿವೃದ್ಧಿ ಮೂಲಕ ಮತ್ತು ತಮ್ಮ ಕೆಲಸಗಳ ಮೂಲಕ ಸಾರ್ವಜನಿಕರ ನಂಬಿಕೆಯನ್ನು ಗಳಿಸಲು ಸಾಧ್ಯವಿಲ್ಲ. ಅದಕ್ಕಾಗಿ ಜನರ ದಾರಿ ತಪ್ಪಿಸುವ, ಆಧಾರ ರಹಿತ ಹೇಳಿಕೆಗಳನ್ನ ನೀಡುವುದು ಅಭ್ಯಾಸ ಆಗಿಬಿಟ್ಟಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದ್ರೆ ಆರೋಗ್ಯಕರ ರಾಜಕೀಯ ಎಂದಿಗೂ ದಾರಿ ತಪ್ಪಲ್ಲ ಎಂದು ಕುಟುಕಿದರು.

ಸಶಸ್ತ್ರ ಪಡೆಗಳಲ್ಲಿ ಎಲ್ಲಾ, ಜಾತಿ, ಧರ್ಮ, ಪಂಗಡಗಳ ಜನರು ಇದ್ದಾರೆ. ಪ್ರತಿಯೊಬ್ಬರೂ ತಮ್ಮದೇ ಆದ ಧರ್ಮ ಮತ್ತು ಧಾರ್ಮಿಕ ಆಚರಣೆಗಳನ್ನ ಅನುಸರಿಸುತ್ತಾರೆ. ಆ ಆಚರಣೆಗಳನ್ನು ನಿರ್ವಹಿಸುವ ಪುರೋಹಿತರೂ ಅಲ್ಲಿ ಉಪಸ್ಥಿತರಿರುತ್ತಾರೆ. ಆದ್ರೆ ಸೇನೆಯಲ್ಲಿ ಯಾವುದೇ ರೀತಿಯ ತಾರತಮ್ಯವಿಲ್ಲ. ಜಾತಿವಾದವಿಲ್ಲ, ಕೋಮು ದ್ವೇಷ, ಪಕ್ಷಪಾತವಾಗಲಿ ಇಲ್ಲ. ದೇಶ ಅಂತ ಬಂದಾಗ ಅವರೆಲ್ಲರೂ ಭಾರತೀಯರಾಗಿದ್ದಾರೆ. ಮಿಲಿಟರಿ ಕರ್ತವ್ಯ ನಿರ್ವಹಿಸುವುದೇ ಅವರ ಗುರಿಯಾಗಿದೆ. ಹಾಗಾಗಿ ನಮ್ಮ ಸಶಸ್ತ್ರ ಪಡೆಗಳನ್ನ ರಾಜಕೀಯಕ್ಕೆ ಎಳೆದು ತರೋದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದರು.

ಸೈನಿಕರಿಗೆ ಒಂದೇ ಧರ್ಮವಿದೆ, ಅದು ಸೈನ್ಯ ಧರ್ಮ ಎಂದು ಹೇಳಿದ್ದಾರೆ. ಅಲ್ಲದೆ, ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಸೈನಿಕರು ಶೌರ್ಯದ ಮೂಲಕ ಭಾರತದ ತಲೆಯನ್ನು ಎತ್ತರಕ್ಕೆ ಏರಿಸಿದ್ದಾರೆ ಎಂದು ರಕ್ಷಣಾ ಸಚಿವ ಪ್ರತಿಪಾದಿಸಿದ್ದಾರೆ.

ಮುಂದುವರೆದು ಮಾತನಾಡಿದ ಸಿಂಗ್​, ಮೀಸಲಾತಿ ಇರಬೇಕು. ಬಿಜೆಪಿ ಕೂಡ ಮೀಸಲಾತಿಯ ಬೆಂಬಲಿಗರಾಗಿದ್ದೇವೆ. ನಾವು ಬಡವರಿಗೆ ಮೀಸಲಾತಿ ನೀಡಿದ್ದೇವೆ. ಆದರೆ ಸೇನೆಯ ಬಗ್ಗೆ? ನಮ್ಮ ಸೇನಾ ಸೈನಿಕರಿಗೆ ಒಂದೇ ಧರ್ಮವಿದೆ. ಆ ಧರ್ಮ ಸೈನ್ಯ ಧರ್ಮ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮವಿಲ್ಲ. ನಮ್ಮ ಸೇನೆಯನ್ನು ರಾಜಕೀಯಕ್ಕೆ ಎಳೆಯಬೇಡಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಜಾತಿ, ಪಂಥ ಮತ್ತು ಧರ್ಮದ ಈ ರಾಜಕೀಯವು ದೇಶಕ್ಕೆ ದೊಡ್ಡ ಹಾನಿಯನ್ನು ಉಂಟುಮಾಡಿದೆ. ಸಮಾಜದ ಎಲ್ಲಾ ವರ್ಗಗಳನ್ನು ಮೇಲಕ್ಕೆತ್ತಬೇಕು ಎಂಬುದು ನಮ್ಮ ಚಿಂತನೆಯಾಗಿದೆ. ನಾವು ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದ್ದೇವೆ. ಅಲ್ಲದೆ, ಜಾತಿ, ಪಂಥ ಅಥವಾ ಧರ್ಮದ ಆಧಾರದ ಮೇಲೆ ನಾವು ತಾರತಮ್ಯ ಮಾಡಲು ಬಯಸುವುದಿಲ್ಲ. ನಮ್ಮ ದೇಶದ ಋಷಿಮುನಿಗಳು ಮತ್ತು ಜನರು ಇದರ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಮಂಗಳವಾರ ನಡೆದ ಬಿಹಾರ ಚುನಾವಣಾ ಪ್ರಚಾರ ವೇಳೆ ಮಾತನಾಡಿ ರಾಹುಲ್, ಭಾರತೀಯ ಸೇನೆಯು ದೇಶದ ಜನಸಂಖ್ಯೆಯ ಶೇ.10 ರಷ್ಟು ಜನರ ನಿಯಂತ್ರಣದಲ್ಲಿದೆ ಎಂದು ಹೇಳಿದ್ದರು. ಇದು ಸಂಸ್ಥೆಯಲ್ಲಿ ಮೇಲ್ಜಾತಿಗಳ ಪ್ರಾಬಲ್ಯವನ್ನು ಉಲ್ಲೇಖಿಸುತ್ತದೆ ಎಂದು ರಾಹುಲ್​ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಭಾರತದಲ್ಲಿನ ಆರ್ಥಿಕ ಅಸಮಾನತೆಯ ಸಮಸ್ಯೆಯನ್ನು ಅವರು ಎತ್ತಿ ಗಾಂಧಿ, ದೇಶದಲ್ಲಿ ಜನಸಂಖ್ಯೆಯ ಶೇ. 90 ರಷ್ಟು ದಲಿತರು, ಮಹಾದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಅಂಚಿನಲ್ಲಿರುವ ಸಮುದಾಯಗಳಿಗೆ ಸೇರಿದವರಾಗಿದ್ದರೂ, ಕಾರ್ಪೊರೇಟ್ ಭಾರತ, ಅಧಿಕಾರಶಾಹಿ, ನ್ಯಾಯಾಂಗ ಮತ್ತು ಇತರ ಪ್ರಮುಖ ಸಂಸ್ಥೆಗಳಲ್ಲಿ ಕಡಿಮೆ ಪ್ರಾತಿನಿಧ್ಯವಿದೆ ಎಂದು ಹೇಳಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ರಾಜಕೀಯ
Add as Preferred on Google Follow on Google News
Share. WhatsApp Facebook Twitter Telegram
Previous Articleಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು
Next Article 3ನೇ ಮಹಾಯುದ್ಧದ ಸಾಧ್ಯತೆ ದೂರವಿಲ್ಲ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.