• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕಬ್ಬಿನ ತೂಕದಲ್ಲಿ ವಂಚನೆ ಮಾಡುವ ಕಾರ್ಖಾನೆ ವಿರುದ್ಧ ಕ್ರಮ

Sambrama Prabha News by Sambrama Prabha News
December 16, 2025
in Politics
0
ಕಬ್ಬಿನ ತೂಕದಲ್ಲಿ ವಂಚನೆ ಮಾಡುವ ಕಾರ್ಖಾನೆ ವಿರುದ್ಧ ಕ್ರಮ

Updated By: Priyalachhi

ಬೆಳಗಾವಿ: ರೈತರು ಪೂರೈಸುವ ಕಬ್ಬು ತೂಕದಲ್ಲಿ ಮೋಸ ಮಾಡಿದ್ದು, ಸಾಬೀತಾದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.

ವಿಧಾನಸಭೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಕುರಿತು ಸಚಿವರು ಮಾತನಾಡಿದರು. ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಅಲ್ಲಿ ಡಿಜಿಟಲ್ ವೇ ಬ್ರಿಡ್ಜ್​​ಗಳಿವೆ. ಸರ್ಕಾರದಿಂದಲೇ ಈ ವರ್ಷ 12 ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವ ಯಂತ್ರದಲ್ಲಿ ಮೋಸ ಆಗುತ್ತಿರುವ ಬಗ್ಗೆ ಯಾವುದೇ ರೈತರು ಇದುವರೆಗೂ ದೂರು ಸಲ್ಲಿಸಿಲ್ಲ ಎಂದರು.

ಬಹುಮಾನ 5 ಲಕ್ಷ ರೂಗೆ ಏರಿಕೆ: ರೈತರು ದೂರು ಸಲ್ಲಿಸಿ, ಬಳಿಕ ಇದು ಸಾಬೀತಾದಲ್ಲಿ ಅಂತಹ ರೈತರಿಗೆ 2 ಲಕ್ಷ ರೂ. ಬಹುಮಾನ ಕೊಡುತ್ತೇವೆ ಎಂದು ಸರ್ಕಾರ ಘೋಷಿಸಿತ್ತು. ಇದೀಗ ಈ ಬಹುಮಾನದ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಒಂದು ವೇಳೆ ತೂಕದಲ್ಲಿ ಮೋಸ ಮಾಡುವ ಯಾವುದೇ ದೂರು ಸಾಬೀತಾದಲ್ಲಿ, ಅಂತಹ ಕಾರ್ಖಾನೆಯವರು ಯಾರೇ ಆಗಿರಲಿ, ಎಷ್ಟೇ ದೊಡ್ಡವರಾಗಿರಲಿ, ನಿಶ್ಚಿತವಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅಂತಹ ಕಾರ್ಖಾನೆ ನಿಲ್ಲಿಸುವ ಕ್ರಮಕ್ಕೂ ಮುಂದಾಗುತ್ತೇವೆ. ಕಾರ್ಖಾನೆಗಳ ಒಳಗೆ ನಾವು ಆಧುನಿಕ ತೂಕದ ಯಂತ್ರ ಅಳವಡಿಕೆಗೆ ಮುಂದಾಗಿದ್ದು, ಕಾರ್ಖಾನೆಯವರು ಅನುಮತಿ ನೀಡುತ್ತಿಲ್ಲ. ಇದರಿಂದ ಸಮಸ್ಯೆ ಉಂಟಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.

Tags: ಶಿವಾನಂದ ಪಾಟೀಲ್
Previous Post

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗೆ ಸ್ವಾಗತ ಕೋರಿದ ರಾಜ್ಯಪಾಲರು!

Next Post

ಕಸ್ತೂರಿ ರಂಗನ್ ವರದಿ ಜಾರಿ ಸಾಧ್ಯವಿಲ್ಲ, ಕೇಂದ್ರಕ್ಕೆ ಪತ್ರ ಬರೆದಿದ್ದೇವೆ: ಸಚಿವ ಈಶ್ವರ ಖಂಡ್ರೆ

Next Post
ಕಸ್ತೂರಿ ರಂಗನ್ ವರದಿ ಜಾರಿ ಸಾಧ್ಯವಿಲ್ಲ, ಕೇಂದ್ರಕ್ಕೆ ಪತ್ರ ಬರೆದಿದ್ದೇವೆ: ಸಚಿವ ಈಶ್ವರ ಖಂಡ್ರೆ

ಕಸ್ತೂರಿ ರಂಗನ್ ವರದಿ ಜಾರಿ ಸಾಧ್ಯವಿಲ್ಲ, ಕೇಂದ್ರಕ್ಕೆ ಪತ್ರ ಬರೆದಿದ್ದೇವೆ: ಸಚಿವ ಈಶ್ವರ ಖಂಡ್ರೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.