BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

‘ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೆಚ್ಚಿನ ಸೌಲಭ್ಯ ಕೊಡಿ’: ಸರ್ಕಾರಕ್ಕೆ 13 ಕಂಪೆನಿಗಳ ಬೇಡಿಕೆ

Author Picture
Published On: April 23, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಕರ್ನಾಟಕದಲ್ಲಿ ಭಾರಿ ಹೂಡಿಕೆ ಮಾಡಲು ಯೋಜಿಸಿರುವ 13 ಕಂಪನಿಗಳಿಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ನೀಡುವ ಬಗ್ಗೆ ಚರ್ಚಿಸಿದೆ. ಕಂಪನಿಗಳ ಬೇಡಿಕೆ ಆಧರಿಸಿ ಪ್ರೋತ್ಸಾಹಕಗಳನ್ನು ನೀಡುವ ಕೆಲಸವನ್ನು ಈ ಉಪಸಮಿತಿ ನೋಡಿಕೊಳ್ಳುತ್ತದೆ.

ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ.

ಕೆಲವು ಕಂಪನಿಗಳು 40 ಶೇಕಡದವರೆಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ಕೇಳಿವೆ. ಇದನ್ನು 35 ಶೇಕಡಾ ಅಥವಾ ಕೆಲ ಸಂದರ್ಭಗಳಲ್ಲಿ 20-25 ಶೇಕಡಾಕ್ಕೆ ಇಳಿಸಬಹುದೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಹೂಡಿಕೆಗಳು ರಾಜ್ಯಕ್ಕೆ ತರುವ ಲಾಭವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಯೋಜನೆಗಳನ್ನು ತಿರಸ್ಕರಿಸಲಾಗಿಲ್ಲ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕಂಪನಿಗಳು ಕನ್ನಡಿಗರಿಗೆ ಉದ್ಯೋಗಗಳಿಗೆ ಆದ್ಯತೆ ನೀಡುವಂತೆ ಖಚಿತಪಡಿಸಿಕೊಳ್ಳಬೇಕೆಂದು ಒತ್ತಿ ಹೇಳಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp