• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕೇರಳಿಗರೊಂದಿಗೆ ಉತ್ತಮ ಬಾಂಧವ್ಯವಿದೆ: BJPಗೆ ಡಿಕೆ.ಶಿವಕುಮಾರ್

Sambrama Prabha News by Sambrama Prabha News
December 31, 2025
in Politics
0
ಕೇರಳಿಗರೊಂದಿಗೆ ಉತ್ತಮ ಬಾಂಧವ್ಯವಿದೆ: BJPಗೆ ಡಿಕೆ.ಶಿವಕುಮಾರ್

Updated By: Priyalachhi 

ಬೆಂಗಳೂರು: ಕೇರಳ ಸಿಎಂ, ಕೇರಳ ಸರಕಾರ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದ್ದೇನೆಯೇ ಹೊರತು, ಕೇರಳಿಗರ ಬಗ್ಗೆ ನಾನು ಮಾತನಾಡಿಲ್ಲ. ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆಯನ್ನು ತಿರುಚುತ್ತಿದ್ದು, ಜನರ ದಾರಿ ತಪ್ಪಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಕೇರಳ ಜನ ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ. ಕೇರಳ ಚುನಾವಣೆ ಪ್ರಚಾರಕ್ಕೆ ನಾನು ಹೋಗುತ್ತೇನೆ. ಅಲ್ಲಿ ನಮ್ಮ ಸರ್ಕಾರ ಬರಲಿದೆ. ಹೀಗಾಗಿ ಬಿಜೆಪಿಯವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಬಿಜೆಪಿಗರು ಈ ರೀತಿ ಹುಳಿ ಹಿಂಡುವ ಕೆಲಸ ಮಾಡಬಾರದು. ನಮ್ಮ ಪಕ್ಷದ ನಾಯಕರು ನಮಗೆ ಸಲಹೆ ನೀಡಿದ್ದು, ನಾವು ಅದನ್ನು ಸ್ವೀಕರಿಸುತ್ತೇವೆ ಎಂದು ಹೇಳಿದರು.

ಇಂದು ಕರ್ನಾಟಕ ನೀರಾವರಿ ನಿಗಮ ಹಾಗೂ ಕೃಷ್ಣ ಭಾಗ್ಯ ಜಲ ನಿಗಮದ ನಿರ್ದೇಶಕರ ಮಂಡಳಿ ಸಭೆ ಮಾಡಿದೆವು. ಈ ನಿಗಮಗಳಲ್ಲಿ 5 ಸಾವಿರ ಕೋಟಿ ರೂಪಾಯಿಯಷ್ಟು ಕಾಮಗಾರಿ ತೆಗೆದುಕೊಳ್ಳುತ್ತಿದ್ದೇವೆ. ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ನಾವು ಯುಕೆಪಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಇದಕ್ಕೆ 70 ಸಾವಿರ ಕೋಟಿ ಹಣ ನೀಡಬೇಕಾಗಿದೆ. ಹೀಗಾಗಿ ಇತರೆ ಕೆಲಸಗಳನ್ನು ಮುಂದಿನ ಹಂತದಲ್ಲಿ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

Tags: ಡಿಕೆ.ಶಿವಕುಮಾರ್
Previous Post

ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ

Next Post

2025 ಸುಧಾರಣೆಯ ವರ್ಷ ಸಾಧನೆಗಳ ಕುರಿತು ಪ್ರಧಾನಿ ಮೋದಿ ಲೇಖನ

Next Post
2025 ಸುಧಾರಣೆಯ ವರ್ಷ ಸಾಧನೆಗಳ ಕುರಿತು ಪ್ರಧಾನಿ ಮೋದಿ ಲೇಖನ

2025 ಸುಧಾರಣೆಯ ವರ್ಷ ಸಾಧನೆಗಳ ಕುರಿತು ಪ್ರಧಾನಿ ಮೋದಿ ಲೇಖನ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.