BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

Author Picture
Published On: January 22, 2026

—Advertisement—

Updated By: Priyalachhi

ಬೆಂಗಳೂರು: ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ಗುರುವಾರ ಆರಂಭವಾಗಿದ್ದು, ಜನವರಿ 31ರ ಶವಿವಾರದವರೆಗೆ ನಡೆಯಲಿದೆ. ಈ ನಡುವೆ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣ ಮತ್ತು ವಿರೋಧ ಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ತಿನ ಸಭಾ ನಾಯಕ ಎನ್.ಎಸ್. ಭೋಸರಾಜು ಉಪಸ್ಥಿತರಿರಲಿದ್ದಾರೆ.

ಏತನ್ಮಧ್ಯೆ ಉಭಯ ಸದನಗಳನ್ನು ಉದ್ದೇಶಿಸಿ ಇಂಜು ಮಾತನಾಡಿದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರು ಸಾಂಪ್ರದಾಯಿಕವಾಗಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದುವ ಬದಲಾಗಿ ತಾವೇ ಸಿದ್ಧಪಡಿಸಿದ ಭಾಷಣ ಓದಿರುವುದು ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಅದೂ ಕೂಡ ಬರೀ ಎರಡು ನಿಮಿಷಗಳ ಭಾಷಣ ಮಾಡಿ ಹೊರನಡೆದಿದ್ದುಾರೆ. ರಾಜ್ಯಪಾಲರ ಈ ನಡೆಯನ್ನು ಕಾಂಗ್ರೆಸ್ ಶಾಸಕರು ಖಂಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp