BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ

Author Picture
Published On: May 15, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗಾಲಾಗಿರುವ ಸಾಮಾನ್ಯ ಜನರಿಗೆ ಖಾಸಗಿ ಬಸ್​​ ಮಾಲೀಕರು ಮತ್ತೊಂದು ಬೆರೆ ಏರಿಕೆ ಶಾಕ್​ ಕೊಟ್ಟಿದ್ದಾರೆ.

ಇಂದು ಬೆಳಗ್ಗೆಯಿಂದ ಪೆಟ್ರೋಲ್, ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಖಾಸಗಿ ಬಸ್‌ ಪ್ರಯಾಣ ದರ ಏರಿಕೆಗೆ ತೀರ್ಮಾನಿಸಲಾಗಿದೆ.

ಶೇ.20 ರಿಂದ ಶೇ. 30ರಷ್ಟು ಟಿಕೆಟ್ ದರ ಏರಿಕೆ ಮಾಡುವ ಬಗ್ಗೆ ಖಾಸಗಿ ಬಸ್​​ ಮಾಲಕರು ಮಾಹಿತಿ ನೀಡಿದ್ದಾರೆ.

ಪ್ರತಿದಿನ ಬಸ್​​ ಒಂದಕ್ಕೆ ಕನಿಷ್ಠ 150 ಲೀಟರ್ ಡಿಸೇಲ್​​ ಹಾಕಿಸುತ್ತೇವೆ. ಇಂಧನ ಬೆಲೆಯಲ್ಲಿ 3 ರೂ. ಹೆಚ್ಚಳವಾಗಿರುವ ಕಾರಣ ನಿತ್ಯ 450 ರೂಪಾಯಿ ಹೆಚ್ಚುವರಿಯಾಗಿ ನಮಗೆ ಹೊರೆಯಾಗಲಿದೆ. ಹೀಗಾಗಿ ಟಿಕೆಟ್​ ದರ ಏರಿಸೋದು ನಮಗೂ ಅನಿವಾರ್ಯವಾಗಿದೆ. ಇದರ ಪರಿಣಾಮ ಪ್ರಯಾಣಿಕರ ಮೇಲೆ ಉಂಟಾಗಲಿದೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಅವರು ತಿಳಿಸಿದ್ದಾರೆ.

ಜನ ಸಾಮಾನ್ಯರ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯ ಬರೆ ಎಳೆದಿದೆ. ಪೆಟ್ರೋಲ್​-ಡೀಸೆಲ್​, ಚಿನ್ನ-ಬೆಳ್ಳಿ, ಅಕ್ಕಿ-ಬೆಳ್ಳಿಯಿಂದಿಡಿದು ಪ್ರತಿಯೊಂದು ವಸ್ತುವಿನ ಬೆಲೆ ಕೂಡ ಗಗನಕ್ಕೇರಿದೆ. ಇದೀಗ ಬಸ್​ ಟಿಕೆಟ್​ ದರ ಕೂಡ ಹೆಚ್ಚಿದ್ದು, ಪ್ರಯಾಣಿಕರಿಗೆ ನುಂಗಲಾರದ ತುತ್ತಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp