BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

,

ತಮಿಳುನಾಡು ಸಿಎಂ ವಿಜಯ್ ಗೆ ಆಡಳಿತ ಅನುಭವ ಕೊರತೆಯಿದೆ: KN ರಾಜಣ್ಣ

Author Picture
Published On: May 14, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರಿಗೆ ಆಡಳಿತ ಅನುಭವದ ಕೊರತೆಯಿದೆ. ಹಣಕಾಸು ನಿರ್ವಹಣೆ ಬಗ್ಗೆ ಯೋಚನೆ ಮಾಡದೆ ಅವರು ಏಕಾಏಕಿ 700ಕ್ಕೂ ಹೆಚ್ಚು ಮದ್ಯದಂಗಡಿಗಳನ್ನು ಮುಚ್ಚುವಂತೆ ಆತುರದ ನಿರ್ಧಾರ ತೆಗೆದುಕೊಂಡು ಆದೇಶಿಸಿದ್ದಾರೆ ಎಂದು ಶಾಸಕ ಹಿರಿಯ ನಾಯಕ ಕೆ ಎನ್ ರಾಜಣ್ಣ ಟೀಕಿಸಿದ್ದಾರೆ.

ಮಧುಗಿರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯದಂಗಡಿಗಳಿಂದ ಹೆಚ್ಚಿನ ಆದಾಯ ಬರುತ್ತದೆ, ಆದಾಯದ ಹಾದಿ ಮುಚ್ಚಿಕೊಂಡರೆ ಫ್ರೀ ಬೀಸ್ ನೀಡಲು ಸಾಧ್ಯವೇ, ವಿಜಯ್ ಮುಂದಿನ ದಿನಗಳಲ್ಲಿ ಎಲ್ಲವನ್ನೂ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ರಾಹುಲ್ ಗಾಂಧಿಯವರು ಹೋಗಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅವರು ಹೋದರೆ ಎಲ್ಲಾ ಕಾಂಗ್ರೆಸ್ ನಾಯಕರು ಭಾಗಿಯಾದಂತೆ, ವಿಜಯ್ ಅವರಿಗೆ ಕಾಂಗ್ರೆಸ್ ಪಕ್ಷ ಒಂದೇ ಅಲ್ಲ, ಬೇರೆ ಪಕ್ಷಗಳೂ ಬೆಂಬಲ ನೀಡಿದ್ದಾರೆ ಎಂದರು.

ವಿಜಯ್ ಅವರು ಹೋಗುವ ಹಾದಿ ಬಹಳ ಮುಳ್ಳಿನದ್ದಾಗಿದೆ, ಕರ್ನಾಟಕದಲ್ಲಿ ಉಚಿತ ಭಾಗ್ಯಗಳನ್ನು ಕೊಟ್ಟು ಸರ್ಕಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ನೋಡುತ್ತಿದ್ದೇವೆ, ಆ ತರ ತಮಿಳು ನಾಡು ಸರ್ಕಾರದಲ್ಲಿ ಕೂಡ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಇನ್ನು ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ. ನಮ್ಮಲ್ಲಿ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆಯೋ ಇಲ್ಲವೋ ಅದು ನಮ್ಮ ಪಕ್ಷದ ಆಂತರಿಕ ವಿಚಾರ, ನಮಗೂ ಅದಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಇಂದಿರಾ ಗಾಂಧಿ ಕಾಲದ ಪರಿಸ್ಥಿತಿ ಬೇರೆ, ಇಂದಿನ ಪರಿಸ್ಥಿತಿಯೇ ಬೇರೆ. ಅಂದು ಬರಗಾಲವಿತ್ತು, ಇಂದಿನ ಪರಿಸ್ಥಿತಿಗೆ ಅಂದಿನ ಹೇಳಿಕೆ ತಾಳೆಯಾಗುವುದಿಲ್ಲ. ರಾಜಕೀಯದಲ್ಲಿ ಯಾರೂ ಶಾಶ್ವತ ಅಲ್ಲ, ವಾಸ್ತವ ಅರಿಯಲಿ, ಪ್ರಧಾನಿ ಮೋದಿ ಆಕಾಶದಿಂದ ಇಳಿದು ಮಾತನಾಡಲಿ, ಭೂಮಿಯ ಮೇಲಿದ್ದು ಹೇಳಿಕೆ ನೀಡಲಿ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp