• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ನಟ ದರ್ಶನ್ ಗೆ ಬಿಗ್ ಶಾಕ್: ಸದ್ಯಕ್ಕಿಲ್ಲ ಜಾಮೀನು

Sambrama Prabha News by Sambrama Prabha News
May 15, 2026
in Home, Latest News, Nation News
0
ನಟ ದರ್ಶನ್ ಗೆ ಬಿಗ್ ಶಾಕ್: ಸದ್ಯಕ್ಕಿಲ್ಲ ಜಾಮೀನು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದ್ದು, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣವನ್ನು ತೀರ್ಮಾನಿಸಬೇಕೆಂದು ಆದೇಶ ನೀಡಿದೆ.

ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ನೇತೃತ್ವದ ಇಬ್ಬರು ನ್ಯಾಯಮೂರ್ತಿಗಳ ಪೀಠ ಈ ಆದೇಶ ನೀಡಿದ್ದು, ಇಂದಿನಿಂದಲೇ ವಿಚಾರಣೆಯನ್ನು ಆದ್ಯತೆಯ ಮೇರೆಗೆ ನಡೆಸಬೇಕು ಎಂದು ಹೇಳಿದೆ.

ಜೈಲಿನಲ್ಲಿ ಇತರ ಕೈದಿಗಳಿಗೆ ನೀಡಲಾಗುವಂತೆ ದರ್ಶನ್ ಅವರಿಗೆ ಸಹ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಒಂದು ವರ್ಷದವರೆಗೆ ಅರ್ಜಿ ಸಲ್ಲಿಕೆ ಇಲ್ಲ

ಮುಂದಿನ ಒಂದು ವರ್ಷದವರೆಗೆ ದರ್ಶನ್ ಯಾವುದೇ ಜಾಮೀನು ಅರ್ಜಿ ಸಲ್ಲಿಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ಆದರೆ ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳ್ಳದಿದ್ದರೆ, ಆ ಬಳಿಕ ಅವರಿಗೆ ಜಾಮೀನು ಪರಿಗಣಿಸಬಹುದು ಎಂದು ಹೇಳಿದೆ.

ಹಿಂದಿನ ವಿಚಾರಣೆಗಳಲ್ಲಿ, ಜೈಲಿನಲ್ಲಿನ ಅಕ್ರಮಗಳು ಹಾಗೂ ಸಹ ಕೈದಿಗಳಿಂದ ಕಿರುಕುಳ ಮತ್ತು ಬೆದರಿಕೆ ಎದುರಿಸುತ್ತಿರುವುದಾಗಿ ದರ್ಶನ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಇದಾದ ಬಳಿಕ ನ್ಯಾಯಾಲಯ ಜೈಲು ಅಧಿಕಾರಿಗಳಿಂದ ವರದಿ ಕೇಳಿತ್ತು.

ವಿಶೇಷ ಸರ್ಕಾರಿ ಅಭಿಯೋಜಕರು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿ, ದರ್ಶನ್ ಮಾಡಿದ್ದ ಎಲ್ಲ ಆರೋಪಗಳನ್ನು ವಿಡಿಯೋ ಸಾಕ್ಷ್ಯಗಳೊಂದಿಗೆ ತಳ್ಳಿಹಾಕಿದ್ದರು.

ವಿಚಾರಣೆ ವೇಳೆ, ಪ್ರಕರಣದಲ್ಲಿರುವ 270 ಸಾಕ್ಷಿದಾರರಲ್ಲಿ ಇದುವರೆಗೆ ಕೇವಲ 10 ಮಂದಿಯಷ್ಟೇ ವಿಚಾರಣೆಗೆ ಒಳಪಟ್ಟಿದ್ದಾರೆ ಎಂಬುದೂ ಗಮನಕ್ಕೆ ಬಂತು. ವಿಚಾರಣೆಯಲ್ಲಿ ವಿಳಂಬವಾಗುತ್ತಿರುವ ಕಾರಣ, ಉಳಿದ ಸಾಕ್ಷಿದಾರರ ವಿಚಾರಣೆ ಮುಗಿಯುವವರೆಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ದರ್ಶನ್ ಮನವಿ ಮಾಡಿದ್ದರು.

Tags: ನಟ ದರ್ಶನ್
Previous Post

ಹಿಜಾಬ್ ಹಿಂದಿನಿಂದಲೇ ಇದ್ದ ಪದ್ಧತಿ, ಅದನ್ನು ಬಿಜೆಪಿ ನಿಷೇಧಿಸಿತ್ತು, ನಾವು ತೆಗೆದಿದ್ದೇವೆ ಅಷ್ಟೇ

Next Post

ಸಿಎಂ ಹುದ್ದೆ ಬದಲಾವಣೆ ವದಂತಿ ನಡುವೆ 64ನೇ ಹುಟ್ಟುಹಬ್ಬ ಆಚರಿಸಿಕೊಂಡ DK ಶಿವಕುಮಾರ್

Next Post
ಸಿಎಂ ಹುದ್ದೆ ಬದಲಾವಣೆ ವದಂತಿ ನಡುವೆ 64ನೇ ಹುಟ್ಟುಹಬ್ಬ ಆಚರಿಸಿಕೊಂಡ DK ಶಿವಕುಮಾರ್

ಸಿಎಂ ಹುದ್ದೆ ಬದಲಾವಣೆ ವದಂತಿ ನಡುವೆ 64ನೇ ಹುಟ್ಟುಹಬ್ಬ ಆಚರಿಸಿಕೊಂಡ DK ಶಿವಕುಮಾರ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.