• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಬೆಳೆ ವಿಮೆ ವ್ಯಾಪ್ತಿಗೆ ತೆಂಗು ಸೇರಿಸಲು ಕೋರಿ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ

Sambrama Prabha News by Sambrama Prabha News
January 27, 2026
in Politics
0
ಬೆಳೆ ವಿಮೆ ವ್ಯಾಪ್ತಿಗೆ ತೆಂಗು ಸೇರಿಸಲು ಕೋರಿ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ

Updated By: Priyalachhi

ಬೆಂಗಳೂರು: ಅಡಿಕೆ ಸೇರಿದಂತೆ ಮತ್ತಿತರ ಬೆಳೆಗಳಿಗೆ ನೀಡಲಾಗುವ ಬೆಳೆ ವಿಮೆ ಪರಿಹಾರದ ವ್ಯಾಪ್ತಿಗೆ ತೆಂಗು ಬೆಳೆಯನ್ನ ಪರಿಗಣಿಸಬೇಕೆಂದು ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತೋಟಗಾರಿಕೆ ಸಚಿವರ ಪರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಚಿದಾನಂದಗೌಡ: ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ, ತುಮಕೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಹೆಚ್ಚು ತೆಂಗು ಬೆಳೆಯುವ ಪ್ರದೇಶವಾಗಿದೆ. ಆದರೆ ತೆಂಗಿನ ಮರಗಳಲ್ಲಿ ಕಾಣಿಸಿಕೊಳ್ಳುವ ಕೆಂಪುಮೂತಿ ಹುಳ ಹಾಗೂ ಅಣಬೆ ರೋಗದಿಂದ ಬೆಳೆ ನಷ್ಟಗೊಂಡು ರೈತರು ಭಾದಿತರಾಗುತ್ತಿದ್ದಾರೆ. ಹೀಗಾಗಿ ಅಡಿಕೆ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆ ವಿಮೆ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದರು.

ತೆಂಗಿನ ತೋಟಗಳ ಪುನಃಶ್ಚೇತನಕ್ಕೆ ಸಹಾಯಧನ ಎಂದ ಸಚಿವರು: ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತೆಂಗಿನಕಾಯಿಗೆ ಉತ್ತಮ ಬೆಲೆ ಇರುವುದು ಹರ್ಷ ತಂದಿದೆ. ತೆಂಗಿನ ತೋಟಗಳ ಪುನಃಶ್ಚೇತನ ಹಾಗೂ ಕೀಟ ನಿರೋಧಕ ಶಕ್ತಿ ಬೆಳೆಸಿಕೊಳ್ಳಲು ಪ್ರತಿ ಹೆಕ್ಟೇರ್ ಗೆ 54 ಸಾವಿರ ಪರಿಹಾರವನ್ನ ಎರಡು ವರ್ಷದ ಅವಧಿಗೆ ಸಹಾಯಧನ ನೀಡಲಾಗುತ್ತಿದೆ. ಆದರೆ, ಬೆಳೆ ನಷ್ಟ ಪರಿಹಾರ ಯೋಜನೆಯು ತೋಟಗಾರಿಕೆ ಇಲಾಖೆಯಲ್ಲಿಲ್ಲ. 2023ರಿಂದ ಈವರೆಗೂ ಕೆಂಪುಮೂತಿ ಹುಳುವಿನಿಂದ 10.56 ಲಕ್ಷ ಹಾಗೂ ಅಣಬೆ ರೋಗದಿಂದ 26.48 ಲಕ್ಷ ತೆಂಗಿನ ಮರಗಳು ನಾಶವಾಗಿದೆ. ತೆಂಗು ಬೆಳೆಯನ್ನ ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಲು ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದರು.

11 ಶೈತ್ಯಾಗಾರಗಳ ಘಟಕ ತೆರೆಯಲು ಅನುಮತಿ; ತೋಟಗಾರಿಕೆ ಬೆಳೆಗಳು ಬೇಗನೇ ಹಾಳಾಗದಂತೆ ತಡೆಯಲು ರಾಜ್ಯದ 11 ಶೈತ್ಯಾಗಾರ ಘಟಕ ತೆರೆಯಲು ಅನುಮೋದನೆ ನೀಡಲಾಗಿದೆ ಎಂದು ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ಕೇಳಿದ ಪ್ರಶ್ನೆಗೆ ಚಲುವರಾಯಸ್ವಾಮಿ ತಿಳಿಸಿದರು. ರಾಷ್ಟ್ರೀಯ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯಡಿ ರೈತರಿಗೆ ಅನುಕೂಲಕ್ಕಾಗಿ ದಾವಣಗೆರೆ, ಹಾಸನ, ಶಿವಮೊಗ್ಗ, ಬೆಂಗಳೂರು ನಗರ, ರಾಮನಗರ ಬೆಳಗಾವಿ ಸೇರಿದಂತೆ 11 ಕಡೆಗಳಲ್ಲಿ ಶೈತ್ಯಾಗಾರ ಘಟಕ ತೆರೆಯಲಾಗುತ್ತಿದೆ ಎಂದರು.

Tags: ಸಚಿವ ಚಲುವರಾಯಸ್ವಾಮಿ
Previous Post

ಸತತ 9ನೇ ಬಜೆಟ್​​​​​ ಮಂಡಿಸಲಿರುವ ಸಚಿವೆ ಸೀತಾರಾಮನ್

Next Post

ಕಿರುತೆರೆ ನಟಿ ಕಾವ್ಯ ಗೌಡ ಅವರ ಕೌಟುಂಬಿಕ‌ ಕಲಹ ಪೊಲೀಸ್​ ಠಾಣೆ ಮೆಟ್ಟಿಲೇರಿದೆ

Next Post
ಕಿರುತೆರೆ ನಟಿ ಕಾವ್ಯ ಗೌಡ ಅವರ ಕೌಟುಂಬಿಕ‌ ಕಲಹ ಪೊಲೀಸ್​ ಠಾಣೆ ಮೆಟ್ಟಿಲೇರಿದೆ

ಕಿರುತೆರೆ ನಟಿ ಕಾವ್ಯ ಗೌಡ ಅವರ ಕೌಟುಂಬಿಕ‌ ಕಲಹ ಪೊಲೀಸ್​ ಠಾಣೆ ಮೆಟ್ಟಿಲೇರಿದೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.