• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

Sambrama Prabha News by Sambrama Prabha News
May 13, 2026
in Latest News, Nation News, Politics
0
ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸಂಕಷ್ಟ ಮತ್ತು ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೇ ಇಂಧನ ಉಳಿತಾಯ ಹಾಗೂ ಮಿತವ್ಯಯ ಕ್ರಮಗಳ ಭಾಗವಾಗಿ ತಮ್ಮ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ (official convoy vehicle) ಶೇಕಡಾ 50ರಷ್ಟು ಕಡಿತಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆದೇಶ ನೀಡಿದ್ದಾರೆ.

ಇತ್ತೀಚೆಗೆ ವಡೋದರಾ ಮತ್ತು ಗುವಾಹಟಿ ಭೇಟಿಗಳ ವೇಳೆ ಪ್ರಧಾನಿಯವರ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿತ್ತು. ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಅಮೆರಿಕಾ-ಇರಾನ್ ಸಂಘರ್ಷದಿಂದ ಉಂಟಾದ ಆರ್ಥಿಕ ಅನಿಶ್ಚಿತತೆಯ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಡಿಮೆ ಇಂಧನ ಬಳಕೆಗೆ ಪ್ರೋತ್ಸಾಹ ನೀಡುವುದು ಮತ್ತು ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ಮಾದರಿಯಾಗಿ ನಡೆದುಕೊಳ್ಳುವುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ.

ಪ್ರಧಾನಿಯವರ ಭದ್ರತೆಯನ್ನು ನೋಡಿಕೊಳ್ಳುವ ವಿಶೇಷ ಭದ್ರತಾ ಗುಂಪು (SPG) ಗೆ ಬೆಂಗಾವಲು ವಾಹನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೂಡ ಕೇಂದ್ರ ಸರ್ಕಾರ ಸೂಚಿಸಿದೆ. ಆದರೆ ಇದಕ್ಕಾಗಿ ಹೊಸ ವಾಹನಗಳನ್ನು ಖರೀದಿಸುವ ಬದಲು ಈಗಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಬೇಕು ಎಂದು ಪ್ರಧಾನ ಮಂತ್ರಿ ಆದೇಶ ನೀಡಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರಧಾನ ಮಂತ್ರಿಗಳ ಕಚೇರಿ (PMO) ಪ್ರಧಾನಿ ಮೋದಿ ಅವರ ಭಾಷಣದ ಪ್ರತಿಗಳನ್ನು ಹಂಚಿಕೆ ಮಾಡಿದೆ. ಆ ದಾಖಲೆಯಲ್ಲಿ ಪ್ರಸ್ತುತ ಸಂಕಷ್ಟದ ಸಂದರ್ಭ ಮಿತವ್ಯಯಕ್ಕೆ ಕರೆ ಹಾಗೂ ಅನುಸರಿಸಬಹುದಾದ ಕಾರ್ಯಯೋಜನೆ ಸೇರಿಸಲಾಗಿತ್ತು ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ಕಾರ್ಯಯೋಜನೆಯಲ್ಲಿ ದೇಶದ ನಾಗರಿಕರು ಎಲೆಕ್ಟ್ರಿಕ್ ವಾಹನಗಳ ಹೆಚ್ಚುವರಿ ಬಳಕೆ, ಇಂಧನ ಬಳಕೆ ಕಡಿತ ಹಾಗೂ ಅನಗತ್ಯ ಪ್ರಯಾಣವನ್ನು ತಗ್ಗಿಸಲು ಆನ್‌ಲೈನ್ ಮೂಲಕ ಸಭೆಗಳನ್ನು ಹೆಚ್ಚೆಚ್ಚು ನಡೆಸುವಂತೆ ಸೂಚಿಸಲಾಗಿದೆ. ಪಶ್ಚಿಮ ಏಷ್ಯಾದ ಅಸ್ಥಿರತೆಯಿಂದ ಉಂಟಾದ ಜಾಗತಿಕ ಆರ್ಥಿಕ ಒತ್ತಡಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

ಆಡಳಿತದ ಕಾರ್ಯಕ್ಷಮತೆ ಮತ್ತು ಭದ್ರತಾ ಮಾನದಂಡಗಳನ್ನು ಕಾಪಾಡಿಕೊಂಡೇ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಪ್ರಾಯೋಗಿಕ ಮಿತವ್ಯಯ ಕ್ರಮಗಳನ್ನು ಅನುಸರಿಸಬೇಕು ಎಂದು ಪ್ರಧಾನಿ ಮೋದಿ ಬಯಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags: ಪ್ರಧಾನಿ ಮೋದಿ
Previous Post

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೊಡ್ಡ ಅವಮಾನ: ಡಿಕೆ ಶಿವಕುಮಾರ್

Next Post

ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ

Next Post
ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ

ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.