• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು

Sambrama Prabha News by Sambrama Prabha News
December 22, 2025
in Nation News, Politics
0
ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು

Updated By: Priyalachhi

ನವದೆಹಲಿ: ನವದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರಿ ಎದುರು ನಡೆದ ಪ್ರತಿಭಟನೆಗೆ ಸಂಬಂಧಿಸಿ ಬಾಂಗ್ಲಾದೇಶ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಹಾಗೂ ಆರೋಪವನ್ನು ಭಾರತ ನಿರಾಕರಿಸಿದ್ದು, ಆರೋಪ ತಪ್ಪಾಗಿದ್ದು, ದಾರಿತಪ್ಪಿಸುವ ಪ್ರಚಾರವಾಗಿದೆ ಎಂದು ಹೇಳಿದೆ.

ಡಿಸೆಂಬರ್ 20ರಂದು ಬಾಂಗ್ಲಾದೇಶದ ಮಯ್ಮನ್ಸಿಂಗ್ ಜಿಲ್ಲೆಯಲ್ಲಿ ದೀಪು ಚಂದ್ರ ದಾಸ್ ಎಂಬವರ ಹತ್ಯೆಯನ್ನು ಖಂಡಿಸಿ ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಸುಮಾರು 20–25 ಮಂದಿ ಯುವಕರು ಕೆಲಕಾಲ ಬಾಂಗ್ಲಾದೇಶ ರಾಯಭಾರಿ ಎದುರು ಪ್ರತಿಭಟನೆ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಎಂ. ತೌಹೀದ್ ಹೊಸೈನ್ ಅವರು, ಬಾಂಗ್ಲಾದೇಶ ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆಯಾಗಿದ್ದು, ಅತ್ಯಂತ ಭದ್ರತಾ ವಲಯದಲ್ಲಿರುವ ಹೈಕಮಿಷನ್ ಬಳಿ 25–30 ಮಂದಿ ಹೇಗೆ ತಲುಪಿದರು ಎಂಬುದೇ ಪ್ರಶ್ನೆಯಾಗಿದೆ ಎಂದು ಹೇಳಿದ್ದರು.

ಬಾಂಗ್ಲಾದೇಶ ಸರ್ಕಾರಿ ಸುದ್ದಿ ಸಂಸ್ಥೆ ಬಿಎಸ್‌ಎಸ್ ವರದಿ ಪ್ರಕಾರ, ಆ ಪ್ರತಿಭಟನಾಕಾರರು ಕೇವಲ ಹತ್ಯೆ ವಿರುದ್ಧ ಘೋಷಣೆ ಕೂಗಲಿಲ್ಲ, “ಇತರೆ ಹೇಳಿಕೆಗಳನ್ನೂ ನೀಡಿದ್ದಾರೆ. ಬಾಂಗ್ಲಾದೇಶದ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ತಪ್ಪುದಾರಿ ತಪ್ಪಿಸುವವುಗಳಲ್ಲ ಎಂದು ತಿಳಿಸಿದ್ದರು.

ಭಾರತೀಯ ಪತ್ರಿಕಾ ಪ್ರಕಟಣೆಗೆ ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ. ಎರಡು ದೇಶಗಳೂ ರಾಜತಾಂತ್ರಿಕ ಮಾರ್ಗಗಳ ಮೂಲಕ ಸಂಪರ್ಕದಲ್ಲಿವೆ. ಪರಿಸ್ಥಿತಿ ಹದಗೆಟ್ಟರೆ ನಮ್ಮ ರಾಯಭಾರಿ ಅಧಿಕಾರಿಗಳ ಸಂಖ್ಯೆ ಕಡಿಮೆ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದರು. ಇದೇ ವೇಳೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಭಾರತ ಮೇಲೆ ಭರವಸೆ ಇದೆ ಎಂದು ಹೇಳಿದ್ದರು.

Tags: ಬಾಂಗ್ಲಾದೇಶಭಾರತ
Previous Post

ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜ ಒಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

Next Post

ಡಿಸೆಂಬರ್ 25ರಿಂದ ಬೆಂಗಳೂರಿನಲ್ಲಿ 2ನೇ ವಿಶ್ವ ಆಯುರ್ವೇದ ಸಮ್ಮೇಳನ

Next Post
ಡಿಸೆಂಬರ್ 25ರಿಂದ ಬೆಂಗಳೂರಿನಲ್ಲಿ 2ನೇ ವಿಶ್ವ ಆಯುರ್ವೇದ ಸಮ್ಮೇಳನ

ಡಿಸೆಂಬರ್ 25ರಿಂದ ಬೆಂಗಳೂರಿನಲ್ಲಿ 2ನೇ ವಿಶ್ವ ಆಯುರ್ವೇದ ಸಮ್ಮೇಳನ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.