BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ಸದನದಿಂದ ಬಿ.ಕೆ.ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಆಗ್ರಹ

Author Picture
Published On: January 23, 2026

—Advertisement—

Updated By: Priyalachhi

ಬೆಂಗಳೂರು: ಚುಟುಕು ಭಾಷಣಕ್ಕೆ ಸೀಮಿತಗೊಳಿಸಿ ಜಂಟಿ ಅಧಿವೇಶನದಿಂದ ಹೊರನಡೆದಿದ್ದ ರಾಜ್ಯಪಾಲರಿಗೆ ತಡೆದು ಅಗೌರವ ಸೂಚಿಸಿರುವ ಕಾಂಗ್ರೆಸ್​ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಜಂಟಿ ಅಧಿವೇಶನದ ಎರಡನೇ ದಿನವಾದ ಶುಕ್ರವಾರ (ಇಂದು) ಕಲಾಪ ಆರಂಭವಾಗುತ್ತಿದ್ದಂತೆ, ಛಲವಾದಿ ನಾರಾಯಣಸ್ವಾಮಿ ಅವರು ಈ ವಿಷಯ ಪ್ರಸ್ತಾಪಿಸಿದರು. ಉಭಯ ಸದನವನ್ನು ಉದ್ದೇಶಿಸಿ ಚುಟುಕು ಭಾಷಣ ಮುಗಿಸಿ ಹೊರ ಹೋಗುತ್ತಿದ್ದ ರಾಜ್ಯಪಾಲರ ಎದುರು ಗೂಂಡಾಗಳ ರೀತಿ ವರ್ತಿಸಿ, ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ಮೂಲಕ ಗವರ್ನರ್​​ಗೆ ಅಗೌರವ ಸೂಚಿಸಿದ್ದಾರೆ. ಹೀಗಾಗಿ, ಅವರನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ, ದುಂಡಾವರ್ತನೆ ತೋರಿದ ಹರಿಪ್ರಸಾದ್ ವಿರುದ್ಧ ಕ್ರಮ ಆಗಬೇಕು ಎನ್ನುತ್ತ ಒಕ್ಕೋರಲಿನಿಂದ ವಿಪಕ್ಷ ಸದಸ್ಯರು ಎದ್ದು ನಿಂತು ಆಗ್ರಹಿಸಿದರು.

ಛಲವಾದಿ ಮಾತಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಶೇಮ್.. ಶೇಮ್ ಎಂದು ಘೋಷಣೆ ಕೂಗುವ ಮೂಲಕ ತಿರುಗೇಟು ನೀಡಿದರು. ಈ ವೇಳೆ ಕ್ರಿಯಾಲೋಪ ಎತ್ತಿದ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಲು ಆರಂಭಿಸುತ್ತಿದ್ದಂತೆ, ವಿಪಕ್ಷ ಸದಸ್ಯರು ಆಕ್ಷೇಪಿಸಿದರು. ಗೂಂಡಾಗಿರಿ ವರ್ತನೆ ತೋರಿದ ಹರಿಪ್ರಸಾದ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪಟ್ಟು ಹಿಡಿದರು.

ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಷ್ಟ್ರಗೀತೆಗೆ ಅವಮಾನ ಮಾಡಿದ ರಾಜ್ಯಪಾಲರಿಗೆ ಏನು ಶಿಕ್ಷೆ ಕೊಡುತ್ತೀರಾ, ಮೊದಲು ಅದು ಹೇಳಿ ಎಂದು ಒತ್ತಾಯಿಸಿದರು.

ಗದ್ದಲದ ನಡುವೆಯೂ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಸಹ ಭಾಷಣ ಮಾಡಿರಲಿಲ್ಲ, ನಾನು ಸರ್ಕಾರದ ಗುಲಾಮನಲ್ಲ ಎಂದು ಹೇಳಿ ಹೋಗಿದ್ದರು. ಕಾನೂನು ಪ್ರಕಾರ ಹೋರಾಟ ಮಾಡಲಿ. ಅದು ಬಿಟ್ಟು ಗೂಂಡಾಗಿರಿ ಮಾಡುವುದು ಸರಿನಾ? ಗೂಂಡಾಗಿರಿ ಮಾಡಿದವರನ್ನು ಸದನದಿಂದ ಅಮಾನತು ಮಾಡಬೇಕು. ರಾಜ್ಯಪಾಲರಿಗೆ ಅಪಮಾನವಾಗಿದೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp