—Advertisement—

,

ಸಿದ್ದರಾಮಯ್ಯ ಆಪ್ತರನ್ನು ಡಿ.ಕೆ ಶಿವಕುಮಾರ್ ಹುಡುಕಿ ಹೊಡೆದು ಹಾಕುತ್ತಿದ್ದಾರೆ: R ಅಶೋಕ್ ವ್ಯಂಗ್ಯ

Author Picture
Published On: April 18, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ. ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿಗಳನ್ನು ಹೊಡೆಯುತ್ತಿದ್ದರೆ, ಡಿಕೆ ಶಿವಕುಮಾರ್ ದೊಡ್ಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಕ್ಯಾಬಿನೆಟ್‌ನಿಂದ ತೆಗೆದುಹಾಕಲ್ಪಟ್ಟ ರಾಜಣ್ಣ, ನಾಗೇಂದ್ರ, ಮತ್ತು ಜಮೀರ್‌ರಂತಹ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಪಕ್ಷದಿಂದ ದೂರ ಮಾಡಲಾಗುತ್ತಿದೆ. ದಾವಣಗೆರೆಯ ಜಬ್ಬಾರ್ ಮತ್ತು ಸಿಎಂ ಕಾರ್ಯದರ್ಶಿಯಾಗಿದ್ದ ನಜೀರ್‌ರನ್ನು ಸಹ ಗೇಟ್ ಪಾಸ್ ನೀಡಿ ಹೊರಹಾಕಲಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲವಿಲ್ಲ. ಒಟ್ಟಾರೆ ಕಾಂಗ್ರೆಸ್ ಪಕ್ಷವು ನಾಯಕತ್ವವಿಲ್ಲದೆ ಬೀದಿ ಭಿಕಾರಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp